ವರುಣ್ ಗಾಂಧಿ 
ದೇಶ

ಹಗಲು ರಾಜಕೀಯ ಸಮಾವೇಶ, ರಾತ್ರಿ ಕರ್ಫ್ಯೂ: ಬಿಜೆಪಿ ಕುರಿತು ವರುಣ್​ ಗಾಂಧಿ ಟೀಕೆ

ಚುನಾವಣೆ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜನರನ್ನು ಸೇರಿಸುವ ಬದಲು, ಅವರು ಮನೆಯಲ್ಲಿಯೇ ಇರಲು ಪ್ರೇರೇಪಿಸಬೇಕು.

ನವದೆಹಲಿ: ಕೋವಿಡ್‌ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳ ನಿರ್ಧಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಟೀಕಿಸಿದ್ದಾರೆ.

ಸೋಂಕನ್ನು ತಡೆಗಟ್ಟುವುದು ನಮ್ಮ ಆದ್ಯತೆಯೇ ಅಥವಾ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು ನಮಗೆ ಮುಖ್ಯವೇ ಎಂಬುದನ್ನು ನಿರ್ಧರಿಸಬೇಕಾಗಿದೆ. ಚುನಾವಣೆ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜನರನ್ನು ಸೇರಿಸುವ ಬದಲು, ಅವರುಮನೆಯಲ್ಲಿಯೇ ಇರಲು ಪ್ರೇರೇಪಿಸಬೇಕು ಎಂದವರು ಕಿವಿಮಾತು ಹೇಳಿದ್ದಾರೆ.

ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಟ್ಟುಗೂಡಿಸುತ್ತಾರೆ. ನಂತರ ರಾತ್ರಿಯಲ್ಲಿ ಕರ್ಫ್ಯೂ ಹೇರುತ್ತಾರೆ. ಇದೇನು ಎಂದು ಸಾಮಾನ್ಯ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಅವರು ಸರ್ಕಾರಗಳನ್ನು ಟೀಕಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!