ಸಂಗ್ರಹ ಚಿತ್ರ 
ದೇಶ

ನೀತಿ ಆಯೋಗದ ಆರೋಗ್ಯ ಸೌಕರ್ಯ ನಿರ್ವಹಣಾ ಪಟ್ಟಿ: ಕೇರಳಕ್ಕೆ ಅಗ್ರ, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ

ನೀತಿ ಆಯೋಗದ ನೂತನ ಆರೋಗ್ಯ ಸೌಕರ್ಯ ನಿರ್ವಹಣಾ ಪಟ್ಟಿಯಲ್ಲಿ ಕೇರಳ ರಾಜ್ಯ ಅಗ್ರ ಸ್ಥಾನದಲ್ಲಿದ್ದು, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ದಕ್ಕಿದೆ.

ನವದೆಹಲಿ: ನೀತಿ ಆಯೋಗದ ನೂತನ ಆರೋಗ್ಯ ಸೌಕರ್ಯ ನಿರ್ವಹಣಾ ಪಟ್ಟಿಯಲ್ಲಿ ಕೇರಳ ರಾಜ್ಯ ಅಗ್ರ ಸ್ಥಾನದಲ್ಲಿದ್ದು, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ದಕ್ಕಿದೆ.

ನೀತಿ ಆಯೋಗ ಬಿಡುಗಡೆ ಮಾಡಿದ ನಾಲ್ಕನೇ ಆರೋಗ್ಯ ಸೂಚ್ಯಂಕದ ಪ್ರಕಾರ, ದೊಡ್ಡ ರಾಜ್ಯಗಳಲ್ಲಿ ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ ಮತ್ತೆ ಅಗ್ರ ಶ್ರೇಯಾಂಕದ ರಾಜ್ಯವಾಗಿ ಹೊರಹೊಮ್ಮಿದೆ. ಆದರೆ ಉತ್ತರ ಪ್ರದೇಶವು ಅತ್ಯಂತ ಕೆಟ್ಟ ಪ್ರದರ್ಶಕ ರಾಜ್ಯವಾಗಿದೆ.

ನಾಲ್ಕನೇ ಸುತ್ತಿನ ಆರೋಗ್ಯ ಸೂಚ್ಯಂಕವು 2019-20 (ಉಲ್ಲೇಖ ವರ್ಷ) ಅವಧಿಯನ್ನು ಗಣನೆಗೆ ತೆಗೆದುಕೊಂಡಿದ್ದು, ಉತ್ತಮ ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ಪ್ರದರ್ಶಕ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ಚಿಂತಕರ ಚಾವಡಿಯ ವರದಿ ಹೇಳಿದೆ.

ಆದಾಗ್ಯೂ, ಮೂಲ ವರ್ಷದಿಂದ (2018-19) ಉಲ್ಲೇಖ ವರ್ಷಕ್ಕೆ (2019-20) ಅತ್ಯಧಿಕ ಹೆಚ್ಚುತ್ತಿರುವ ಬದಲಾವಣೆಯನ್ನು ದಾಖಲಿಸುವ ಮೂಲಕ ಉತ್ತರ ಪ್ರದೇಶವು ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಸ್ಥಾನದಲ್ಲಿದೆ ಎಂದು ವರದಿ ಸೇರಿಸಲಾಗಿದೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮ ಪ್ರದರ್ಶಕ ರಾಜ್ಯಗಳಾಗಿ ಹೊರಹೊಮ್ಮಿದೆ. ಆದರೆ ಕೇಂದ್ರಾಡಳಿತ ಪ್ರದೇಶಗಳಲ್ಲಿ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಕೆಳಭಾಗದಲ್ಲಿ ಸ್ಥಾನ ಪಡೆದಿವೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಪ್ರಮುಖ ಪ್ರದರ್ಶನಕ ರಾಜ್ಯಗಳಾಗಿ ಉಭಯ ರಾಜ್ಯಗಳು ಹೊರಹೊಮ್ಮಿವೆ. 

ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಯೋಗದೊಂದಿಗೆ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT