ಸಾಂದರ್ಭಿಕ ಚಿತ್ರ 
ದೇಶ

15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್

ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ನವದೆಹಲಿ: ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಜನವರಿ 3 ರಿಂದ 15 -18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಾರಂಭಿಸಲಾಗುತ್ತಿದ್ದು, ಈ ವಯಸ್ಸಿನ ಗುಂಪಿಗೆ ಕೇವಲ ಕೋವಾಕ್ಸಿನ್ ಮಾತ್ರ ಲಭ್ಯವಿರುವುದಾಗಿ ತಿಳಿಸಿದೆ. 

15-18 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಹಾಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಅನಾರೋಗ್ಯದಿಂದ ಬಳಲುತ್ತಿರುವ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, 2007 ಅಥವಾ ಅದಕ್ಕೂ ಮುಂಚೆ ಜನಿಸಿದ ಮಕ್ಕಳು ಕೋ- ವಿನ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ. 

ಸಂಪೂರ್ಣವಾಗಿ ಎರಡು ಡೋಸ್ ಲಸಿಕೆ ಪಡೆದಿರುವ ಆರೋಗ್ಯ, ಫ್ರಂಟ್ ಲೈನ್ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಆದರೆ, ಎರಡನೇ ಡೋಸ್ ಪಡೆದ ದಿನಾಂಕದಿಂದ 9 ತಿಂಗಳು ಅಥವಾ 39 ವಾರ ಪೂರ್ಣಗೊಂಡವರಿಗೆ ಮಾತ್ರ ಮೂರನೇ ಡೋಸ್ ನೀಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

60 ವರ್ಷಕ್ಕೂ ಮೇಲ್ಪಟ್ಟವರು ಹಾಗೂ  ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರಿಗೆ ಎರಡನೇ ಡೋಸ್ ಪಡೆದ 39 ವಾರಗಳ ನಂತರ  ವೈದ್ಯರ ಸಲಹೆ ಮೇರೆಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು,  ಕೋ- ವಿನ್  ಪೋರ್ಟಲ್ ನಲ್ಲಿ ನೋಂದಣಿ ಮತ್ತು ಸೇವೆ ಕಾಯ್ದಿರಿಸುವಿಕೆ ಲಭ್ಯವಿರಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಸ್ಪಷ್ಪಪಡಿಸಿದೆ.

15-18 ವರ್ಷದೊಳಗಿನ 8 ಕೋಟಿ ಫಲಾನುಭವಿಗಳು, 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆಗೊಳಗಾದ  ಸುಮಾರು 10-15 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡಲು ಸರ್ಕಾರ ಎದುರು ನೋಡುತ್ತಿದೆ. ಎಲ್ಲಾ ನಾಗರಿಕರು ಸರ್ಕಾರದ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ  ಉಚಿತ ಲಸಿಕೆ ಪಡೆಯಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT