ವೈದ್ಯರನ್ನು ಎಳೆದೊಯ್ದು ಬಂಧಿಸಿದ ದೆಹಲಿ ಪೊಲೀಸರು 
ದೇಶ

ಪ್ರತಿಭಟನೆ ನಡೆಸುತ್ತಿದ್ದ ವೈದ್ಯರನ್ನು ಎಳೆದೊಯ್ದು ಬಂಧಿಸಿದ ದೆಹಲಿ ಪೊಲೀಸರು

ಕೊರೋನಾ ಎರಡು ಅಲೆಗಳಲ್ಲೂ ಮುಂಚೂಣಿಯಲ್ಲಿದ್ದ ಯುವ ವೈದ್ಯರನ್ನು ಕೋವಿಡ್ ವಾರಿಯರ್ ಎಂದು ಶ್ಲಾಘಿಸಲಾಗಿತ್ತು. ಈಗ ಅದೇ ವಾರಿಯರ್ ಗಳನ್ನು ಪೊಲೀಸರು ಎಳೆದೊಯ್ದು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ...

ನವದೆಹಲಿ: ಕೊರೋನಾ ಎರಡು ಅಲೆಗಳಲ್ಲೂ ಮುಂಚೂಣಿಯಲ್ಲಿದ್ದ ಯುವ ವೈದ್ಯರನ್ನು ಕೋವಿಡ್ ವಾರಿಯರ್ ಎಂದು ಶ್ಲಾಘಿಸಲಾಗಿತ್ತು. ಈಗ ಅದೇ ವಾರಿಯರ್ ಗಳನ್ನು ಪೊಲೀಸರು ಎಳೆದೊಯ್ದು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ನೀಟ್ ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬ ಖಂಡಿಸಿ ವೈದ್ಯರು ಕಳೆದ ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ಸುಪ್ರೀಂ ಕೋರ್ಟ್‌ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವಾಗ ದೆಹಲಿ ಪೊಲೀಸರು ಅವರ ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್(ಆರ್‌ಡಿಎ) ಸಫ್ದರ್‌ಜಂಗ್ ಆಸ್ಪತ್ರೆಯ ಪ್ರಧಾನ ಕಾರ್ಯದರ್ಶಿ ಡಾ.ಅನುಜ್ ಅಗರವಾಲ್ ಅವರು, ತಮ್ಮನ್ನು ಸೇರಿದಂತೆ ಸುಮಾರು 200 ವೈದ್ಯರನ್ನು ಬಂಧಿಸಿ ರಾಜೇಂದ್ರ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದರು. 

2,500 ಕ್ಕೂ ಹೆಚ್ಚು ವೈದ್ಯರನ್ನು ಬಂಧಿಸಲಾಗಿದ್ದು, ತಡರಾತ್ರಿ ಅವರನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಸಹ ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಪೊಲೀಸರು ವೈದ್ಯರೊಂದಿಗೆ ನಡೆದುಕೊಂಡ ರೀತಿ ನನಗೆ ಆಘಾತ ತಂದಿದೆ. ನಾನು 11 ವರ್ಷಗಳಿಂದ ವೈದ್ಯನಾಗಿದ್ದೇನೆ, ಆದರೆ ಇಂತಹ ಕ್ರೂರ ಕ್ರಮವನ್ನು ಯಾವತ್ತೂ ನೋಡಿರಲಿಲ್ಲ. ಪ್ರತಿಭಟನೆಯ ಸಮಯದಲ್ಲಿ ಗದ್ದಲದ ನಂತರ ಅನೇಕ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ”ಡಾ ಅನುಜ್ ಹೇಳಿದರು. ಪ್ರತಿಭಟನೆಯ ಸಂದರ್ಭದಲ್ಲಿ ಅನೇಕ ವೈದ್ಯರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಹಲವಾರು ಮಹಿಳಾ ವೈದ್ಯರನ್ನು ಸಹ ಪುರುಷ ಪೊಲೀಸರು ಎಳೆದೊಯ್ದಿದ್ದಾರೆ. ಹಲವಾರು ಮಹಿಳಾ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಲಾಗಿದೆ ಎಂದು ಡಾ ಅನುಜ್ ಆರೋಪಿಸಿದ್ದಾರೆ. ಅಲ್ಲದೆ "ಇದು ಅತ್ಯಂತ ನಾಚಿಕೆಗೇಡಿನ ಘಟನೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT