ಸಾಂದರ್ಭಿಕ ಚಿತ್ರ 
ದೇಶ

ವಿಮಾನದಲ್ಲಿ, ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತ ಹಾಕಿ: ವಿಮಾನಯಾನ ಸಚಿವಾಲಯ ಸೂಚನೆ

ವಿಮಾನಗಳು ಮತ್ತು ಟರ್ಮಿನಲ್ ಆವರಣದಲ್ಲಿ ಭಾರತೀಯ ಸಂಗೀತ ಬಿತ್ತರವನ್ನು ಪರಿಗಣಿಸುವಂತೆ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಹೇಳಿದೆ.

ನವದೆಹಲಿ: ವಿಮಾನಗಳು ಮತ್ತು ಟರ್ಮಿನಲ್ ಆವರಣದಲ್ಲಿ ಭಾರತೀಯ ಸಂಗೀತ ಬಿತ್ತರವನ್ನು ಪರಿಗಣಿಸುವಂತೆ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಹೇಳಿದೆ.

ದೇಶಿಯ ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಭಾರತೀಯ ಸಂಗೀತ ಪ್ರಚಾರ ಮಾಡಬೇಕು ಎಂದು ಡಿಸೆಂಬರ್ 23 ರಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರಿಗೆ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ಐಸಿಸಿಆರ್ ) ಮನವಿ ಮಾಡಿತ್ತು.

ಈ ಸಂಬಂಧ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಪತ್ರ ಬರೆದಿರುವ ಸಚಿವಾಲಯ, ಜಗತ್ತಿನಾದ್ಯಂತ ವಿವಿಧ ವಿಮಾನಯಾನ ಸಂಸ್ಥೆಗಳು ತಮ್ಮ ದೇಶಕ್ಕೆ ಸೇರಿದ ಸಂಗೀತವನ್ನು ತಮ್ಮ ವಿಮಾನಗಳಲ್ಲಿ ಬಿತ್ತರಿಸುತ್ತಿವೆ. ಉದಾಹರಣೆಗೆ ಅಮೆರಿಕದ ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಜ್ಯಾಸ್ ಸಂಗೀತವನ್ನು ,ಆಸ್ಟ್ರೇಲಿಯಾದ ವಿಮಾನಗಳಲ್ಲಿ ಮೊಜ್ರಾತ್ ಸಂಗೀತವನ್ನು ಪ್ರಸಾರ ಮಾಡಿದರೆ ಮಧ್ಯ ಪೂರ್ವ ದೇಶಗಳ ವಿಮಾನಯಾನ ಸಂಸ್ಥೆಗಳು ಅರಬ್ ಸಂಗೀತವನ್ನು ಬಿತ್ತರಿಸುತ್ತದೆ ಎಂದು ಹೇಳಿದೆ. 

"ಆದರೆ, ಇಂಡಿಯನ್ ಏರ್‌ಲೈನ್ಸ್ ವಿಮಾನದಲ್ಲಿ ಭಾರತೀಯ ಸಂಗೀತವನ್ನು ಅಪರೂಪವಾಗಿ ಬಿತ್ತರಿಸಲಾಗುತ್ತಿದೆ. ನಮ್ಮ ಸಂಗೀತವು ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯನ್ನು ಹೊಂದಿದೆ ಮತ್ತು ಪ್ರತಿಯೊಬ್ಬ ಭಾರತೀಯನು ಅದರ ಬಗ್ಗೆ ನಿಜವಾಗಿಯೂ ಹೆಮ್ಮೆಪಡುವ ಅನೇಕ ವಿಷಯಗಳಲ್ಲಿ ಒಂದನ್ನು ಹೊಂದಿದೆ. ಭಾರತವು ಸಾಂಪ್ರದಾಯಿಕ ಸಂಗೀತದ ಶ್ರೀಮಂತ ವೈವಿಧ್ಯತೆಯನ್ನು ಹೊಂದಿದೆ ಎಂದು ಅದು ಸಚಿವಾಲಯ ಗಮನಿಸಿದೆ. 

"ಭಾರತದ ಅಗಾಧತೆ ಮತ್ತು ವೈವಿಧ್ಯತೆಯಿಂದಾಗಿ, ಭಾರತೀಯ ಸಂಗೀತವು ಹಲವಾರು ಪ್ರಕಾರಗಳನ್ನು ಒಳಗೊಂಡಿದೆ, ಇದರಲ್ಲಿ ಶಾಸ್ತ್ರೀಯ ಸಂಗೀತ, ಜಾನಪದ, ಲಘು ಗಾಯನ, ವಾದ್ಯ ಸಂಗೀತ ಇತ್ಯಾದಿಗಳು ಸೇರಿವೆ ಎಂದು ಅದು ಉಲ್ಲೇಖಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ