ಕಾಳಿಚರಣ್ ಸ್ವಾಮೀಜಿ 
ದೇಶ

ಮಹಾತ್ಮ ಗಾಂಧಿ ನಿಂಧಿಸಿದ್ದ ಹಿಂದೂ ಸ್ವಾಮೀಜಿ ವಿರುದ್ಧ ಕೇಸ್ ದಾಖಲು

ಮಹಾತ್ಮ ಗಾಂಧಿ ವಿರುದ್ಧಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ಸ್ವಾಮೀಜಿ ಕಾಳಿಚರಣ್ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್  ಬುಧವಾರ ಥಾಣೆಯಲ್ಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಮುಂಬೈ: ಮಹಾತ್ಮ ಗಾಂಧಿ ವಿರುದ್ಧಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ಸ್ವಾಮೀಜಿ ಕಾಳಿಚರಣ್ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್  ಬುಧವಾರ ಥಾಣೆಯಲ್ಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಛತ್ತೀಸ್ ಗಢದಲ್ಲಿ ಡಿಸೆಂಬರ್ 26 ರಂದು ನಡೆದ ಧರ್ಮ ಸಂಸದ್ ನಲ್ಲಿ ಗಾಂಧೀಜಿ ಅವರನ್ನು ಹತ್ಯೆ  ಮಾಡಿದ್ದ ನಾಥೂರಾಂ ಗೂಡ್ಸೆ ಅವರನ್ನು ಹೊಗಳುವಾಗ ಕಾಳಿ ಚರಣ್ ಮಹಾತ್ಮ ಗಾಂಧೀಜಿ ವಿರುದ್ದ ಅವಹೇಳನಾಕಾರಿ ಪದ ಬಳಸಿದ್ದರು.

ನೌಪದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಅವದ್, ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ವಿರುದ್ಧ ಕಾಳಿಚರಣ್ ಸ್ವಾಮೀಜಿ ಬಳಸಿರುವ ಪದ ತುಂಬಾ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.  

ಕೋಮು ಪ್ರಚೋದನೆ ಮತ್ತಿತರ ದುರುದ್ದೇಶ ಪೂರಿತ ಉದ್ದೇಶ ಮತ್ತು ಐಪಿಸಿ ಸೆಕ್ಷನ್ 294,295ಎ. 298, 505 (2) ಮತ್ತು 506(2) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ನೌಪದ್ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT