ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ಹೆಚ್ಚಳ: ಆಸ್ಪತ್ರೆಗಳ ಸನ್ನದ್ಧತೆ ಬಲಪಡಿಸುವಂತೆ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ

ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆದಿದ್ದು, ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸಲು, ವ್ಯಾಕ್ಸಿನೇಷನ್ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಭಾರತದಲ್ಲಿ ಗುರುವಾರ 13,154 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 180 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಟ್ಕಳ ದುರಂತ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೇರಿಕೆ, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಬೆಂಗಳೂರು: ಲೀಗ್ ಪಂದ್ಯದ ವೇಳೆ ಹೃದಯಾಘಾತದಿಂದ 39ನೇ ವಯಸ್ಸಿಗೆ ಕರ್ನಾಟಕದ ಕ್ರಿಕೆಟಿಗ ನಿಧನ!

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

KL Rahul ಆಯ್ತು ಇದೀಗ ರಿಷಬ್ ಪಂತ್ ನಾಯಕತ್ವಕ್ಕೆ ಕುತ್ತು?: LSG ಡೈರೆಕ್ಟರ್ ಟಾಮ್ ಮೂಡಿ ಸುಳಿವು!

SCROLL FOR NEXT