ಡಿಎಸ್ ನಾಗಭೂಷಣ್, ನಮಿತಾ ಗೋಖಲೆ 
ದೇಶ

ಕನ್ನಡದ ಡಿಎಸ್ ನಾಗಭೂಷಣ್, ನಮಿತಾ ಗೋಖಲೆ ಸೇರಿದಂತೆ 20 ಮಂದಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಡಿಎಸ್ ನಾಗಭೂಷಣ್, ಖ್ಯಾತ ಲೇಖಕಿ ನಮಿತಾ ಗೋಖಲೆ, ಟಿಎಂಸಿ ಶಾಸಕ ಬ್ರಾತ್ಯಾ ಬಸು ಮತ್ತು ಖ್ಯಾತ ಪಂಜಾಬಿ ಬರಹಗಾರ ಖಾಲಿದ್ ಹುಸೇನ್ ಸೇರಿದಂತೆ 20 ಮಂದಿಯ ಹೆಸರನ್ನು ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಘೋಷಿಸಲಾಗಿದೆ.  

ನವದೆಹಲಿ: ಕನ್ನಡದ ಡಿಎಸ್ ನಾಗಭೂಷಣ್, ಖ್ಯಾತ ಲೇಖಕಿ ನಮಿತಾ ಗೋಖಲೆ, ಟಿಎಂಸಿ ಶಾಸಕ ಬ್ರಾತ್ಯಾ ಬಸು ಮತ್ತು ಖ್ಯಾತ ಪಂಜಾಬಿ ಬರಹಗಾರ ಖಾಲಿದ್ ಹುಸೇನ್ ಸೇರಿದಂತೆ 20 ಮಂದಿಯ ಹೆಸರನ್ನು  ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಘೋಷಿಸಲಾಗಿದೆ.  

ಡಿಎಸ್ ನಾಗಭೂಷಣ ಅವರ ಗಾಂಧಿ ಕಥನ ಕೃತಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇನ್ನು ಬಸು ಬೇವಿನ ಗಿಡದ ಅವರ ಓಡಿ ಹೋದ ಕೃತಿಗೆ ಮಕ್ಕಳ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ತೊಗಲ ಚೀಲದ ಕರ್ಣ ಮಹಾ ಕಾವ್ಯ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದೆ. 

ಏಳು ಕವನ ಸಂಕಲನಗಳು, ಎರಡು ಕಾದಂಬರಿಗಳು, ಐದು ಸಣ್ಣ ಕಥೆಗಳು, ಎರಡು ನಾಟಕಗಳು ಮತ್ತು 20 ಭಾರತೀಯ ಭಾಷೆಗಳಲ್ಲಿ ಜೀವನ ಚರಿತ್ರೆ, ಆತ್ಮಚರಿತ್ರೆ, ವಿಮರ್ಶೆ ಮತ್ತು ಮಹಾಕಾವ್ಯ ವಿಭಾಗಗಳಿಂದ ತಲಾ ಒಂದು ಪುಸ್ತಕಕ್ಕೆ ಪ್ರಶಸ್ತಿ ನೀಡಲಾಗುತ್ತದೆ. 

ಗೋಖಲೆ ಅವರ 'Things To Leave Behind' ಕಾದಂಬರಿ ಮತ್ತು ಬಸು ಮತ್ತು ಹುಸೇನ್ ಅವರ ಕ್ರಮವಾಗಿ ನಾಟಕ ಮತ್ತು ಕಿರು ಕಥೆಗಳಿಗಾಗಿ ಪ್ರಶಸ್ತಿ ಸಂದಿದೆ. ತಮ್ಮ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಗೋಖಲೆ ಟ್ವೀಟರ್ ಮೂಲಕ ತಿಳಿಸಿದ್ದಾರೆ.

ಗುಜರಾತಿ, ಮಣಿಪುರಿ ಮತ್ತು ಉರ್ದು ಭಾಷೆಗಳಲ್ಲಿನ ಪ್ರಶಸ್ತಿಯನ್ನು ತದನಂತರ ಪ್ರಕಟಿಸಲಾಗುವುದು, ಪ್ರಶಸ್ತಿ ವಿಜೇತರಿಗೆ 1,00,000 ರೂ. ನಗದು ಸನ್ಮಾನವನ್ನು ಒಳಗೊಂಡಿರಲಿದೆ ಎಂದು ಸಾಹಿತ್ಯ ಅಕಾಡೆಮಿ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT