ಸಾಂದರ್ಭಿಕ ಚಿತ್ರ 
ದೇಶ

ರೈಲ್ವೆ ಸಚಿವಾಲಯದಿಂದ ನಾಲ್ಕು ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ ಪ್ರಸ್ತಾಪ ಸಾಧ್ಯತೆ

ಎಲ್ಲವೂ ಯೋಜನೆಯ ಪ್ರಕಾರ ನಡೆದರೆ, ಗುವಾಹಟಿ, ಜಮ್ಮು ಮತ್ತು ಪಾಟ್ನಾದಂತಹ ಹೆಚ್ಚಿನ ನಗರಗಳನ್ನು ಸಂಪರ್ಕಿಸುವ ಉದ್ದೇಶದಿಂದ ರೈಲ್ವೆ ಸಚಿವಾಲಯ 2022ರಲ್ಲಿ ರಾಷ್ಟ್ರೀಯ ರೈಲು ಯೋಜನೆಯಡಿ...

ನವದೆಹಲಿ: ಎಲ್ಲವೂ ಯೋಜನೆಯ ಪ್ರಕಾರ ನಡೆದರೆ, ಗುವಾಹಟಿ, ಜಮ್ಮು ಮತ್ತು ಪಾಟ್ನಾದಂತಹ ಹೆಚ್ಚಿನ ನಗರಗಳನ್ನು ಸಂಪರ್ಕಿಸುವ ಉದ್ದೇಶದಿಂದ ರೈಲ್ವೆ ಸಚಿವಾಲಯ 2022ರಲ್ಲಿ ರಾಷ್ಟ್ರೀಯ ರೈಲು ಯೋಜನೆಯಡಿ ನಾಲ್ಕು ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ಗಳನ್ನು ರಚಿಸುವ ಪ್ರಸ್ತಾವನೆ ಸಲ್ಲಿಸಲಿದೆ.

ಸದ್ಯಕ್ಕೆ, ರೈಲ್ವೆ ಸಚಿವಾಲಯ ಈಗಾಗಲೇ ಎಂಟು ಬುಲೆಟ್ ಟ್ರೈನ್ ಕಾರಿಡಾರ್‌ಗಳಲ್ಲಿ ಕೆಲಸ ಮಾಡುತ್ತಿದೆ, ಇದರಲ್ಲಿ ಮೊದಲನೆಯದು ಮುಂಬೈ ಮತ್ತು ಅಹಮದಾಬಾದ್ ನಡುವೆ.

ಈಗ ಹೊಸದಾಗಿ 618 ಕಿಮೀ ಉದ್ದದ ಹೈದರಾಬಾದ್ - ಬೆಂಗಳೂರು, 855 ಕಿಮೀ ಉದ್ದದ ನಾಗ್ಪುರ - ವಾರಣಾಸಿ, 850 ಕಿಮೀ ಉದ್ದದ ಪಾಟ್ನಾ-ಗುವಾಹಟಿ ಮತ್ತು 190 ಕಿಮೀ ಉದ್ದದ ಅಮೃತಸರ-ಪಠಾಣ್‌ಕೋಟ್-ಜಮ್ಮು ಹೈಸ್ಪೀಡ್ ರೈಲು ಕಾರಿಡಾರ್‌ಗಳ ಬಗ್ಗೆ ರೈಲ್ವೆ ಸಚಿವಾಲಯ ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ರೈಲ್ವೇ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ವಾಸ್ತವವಾಗಿ, 2022 ರಲ್ಲಿ ರಾಷ್ಟ್ರೀಯ ರೈಲು ಯೋಜನೆ ಅಡಿ ರೈಲ್ವೇ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ನಗರಗಳನ್ನು ಹೈಸ್ಪೀಡ್ ರೈಲು ಸಂಪರ್ಕದೊಂದಿಗೆ ಸಂಪರ್ಕಿಸುವ ಬಗ್ಗೆ ಯೋಚಿಸುತ್ತಿದೆ.

ಮಂಜೂರಾದ ಮತ್ತು ಉದ್ದೇಶಿತ ಹೈಸ್ಪೀಡ್ ರೈಲು ಕಾರಿಡಾರ್‌ಗಳು ಎಕ್ಸ್‌ಪ್ರೆಸ್‌ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ರೈಲು ಹಳಿಗಳ ಎರಡೂ ಬದಿಗಳಲ್ಲಿ ಸುಂದರವಾದ ಹಸಿರು ಇರಲಿದೆ ಎಂದು ಮೂಲಗಳು ತಿಳಿಸಿವೆ.

2022ರಲ್ಲಿ ರೇಲ್ವೆ ಸಚಿವಾಲಯ ನಾಲ್ಕು ಹೊಸ ಕಾರಿಡಾರ್‌ಗಳ ಪ್ರಸ್ತಾವನೆ ಸಲ್ಲಿಸಿದ ನಂತರ ಹೈ ಸ್ಪೀಡ್ ರೈಲ್ ಕಾರಿಡಾರ್‌ಗಳ ಒಟ್ಟು ಸಂಖ್ಯೆ 8 ರಿಂದ 12 ಕ್ಕೆ ಏರಿಕೆಯಾಗಲಿದೆ.

ಏತನ್ಮಧ್ಯೆ, ಮುಂಬೈ - ಅಹಮದಾಬಾದ್ ಹೈಸ್ಪೀಡ್ ಕಾರಿಡಾರ್‌ ನಂತರ, ಅನುಮೋದಿತ ದೆಹಲಿ - ವಾರಣಾಸಿ, ದೆಹಲಿ - ಅಹಮದಾಬಾದ್, ಮುಂಬೈ - ನಾಗ್ಪುರ, ದೆಹಲಿ - ಅಮೃತಸರ, ಮುಂಬೈ - ಹೈದರಾಬಾದ್ ಮತ್ತು ಚೆನ್ನೈ - ಮೈಸೂರು ಕುರಿತು ವಿವರವಾದ ಯೋಜನಾ ವರದಿಯನ್ನು(ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT