ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ 
ದೇಶ

ವಾರಣಾಸಿಯ ಸಮಾಜವಾದಿ ಪಕ್ಷದ ಶಾಸಕ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ವಾರಣಾಸಿ: ವಿಧಾನಸಭಾ ಚುನಾವಣೆಯ ಸನಿಹದಲ್ಲಿ ವಾರಣಾಸಿಯಲ್ಲಿ ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು ಹಾಲಿ ಶಾಸಕ ಹಾಗೂ ಮಾಜಿ ಸಚಿವ ಶತರುದ್ರ ಪ್ರಕಾಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ವಿದ್ಯಾರ್ಥಿಯಾಗಿದ್ದ ದಿನಗಳಿಂದಲೂ ಸಮಾಜವಾದಿ ಸಿದ್ಧಾಂತಗಳ ಅನುಯಾಯಿಯಾಗಿದ್ದ ಶತರುದ್ರ ಪ್ರಕಾಶ್ ಡಿ.31 ರಂದು ರಾಜ್ಯ ಬಿಜೆಪಿ ಘಟಕದ ಮುಖ್ಯಾಸ್ಥರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಬನಾರಸ್ ಹಿಂದೂ ವಿವಿ (ಬಿಹೆಚ್ ಯು) ನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳಲ್ಲೇ ರಾಜಕೀಯ ಕ್ಷೇತ್ರದತ್ತ ಒಲವು ಹೊಂದಿದ್ದರು 1974 ರಲ್ಲಿ ಮೊದಲ ಬಾರಿಗೆ ವಾರಣಾಸಿ ಕಂಟೋನ್ಮೆಂಟ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ವಿಧಾನಸಭೆಗೆ ಪ್ರವೇಶಿಸಿದ್ದರು.

ಮೂರು ವರ್ಷಗಳ ಬಳಿಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಗೆದ್ದಿದ್ದರು ಶತರುದ್ರಪ್ರಕಾಶ್  

1985 ರಲ್ಲಿ ಲೋಕದಳದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಅವರು 1989 ರಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದರು. ಮುಲಾಯಂ ಸಿಂಗ್ ಯಾದವ್ ಸಚಿವ ಸಂಪುಟದಲ್ಲಿ ಮಂತ್ರಿಯಾಗಿಯೂ ಅವರು ಕಾರ್ಯನಿರ್ವಹಣೆ ಮಾಡಿದ್ದಾರೆ. 

ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವೇಳೆ ಶತರುದ್ರ ಪ್ರಕಾಶ್ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇತ್ತೀಚಿನ ಚಳಿಗಾಲದ ಅಧಿವೇಶನದಲ್ಲಿ ಕಾಶಿ ವಿಶ್ವನಾಥ್ ಕಾರಿಡಾರ್ ಉದ್ಘಾಟನೆಯಾಗಿದ್ದಕ್ಕೆ ವಿಧಾನ ಪರಿಷತ್ ನಲ್ಲಿ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT