ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್ 
ದೇಶ

ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್

ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

ನವದೆಹಲಿ: ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

ಜ.26 ರಂದು ಶಾಂತಿಯುತವಾಗಿ ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತೇವೆ ಎಂದು ಹೇಳಿದ್ದ ರೈತರ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ. 

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪಥ ಬದಲಿಸಿದ ಟ್ರ್ಯಾಕ್ಟರ್ ಗಳು ಪೊಲೀಸರತ್ತ ನುಗ್ಗಿ ಬಂದವು. ಅಷ್ಟೇ ಅಲ್ಲದೇ ಪ್ರತಿಭಟನೆಯನ್ನು ಹೈಜಾಕ್ ಮಾಡಿದ ಕೆಲವು ಕಿಡಿಗೇಡಿಗಳು ಪೊಲೀಸರತ್ತ ತಲ್ವಾರ್ ಬೀಸಿ ಹಿಂಸಾಚಾರವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 

ರೈತರ ಸೋಗಿನಲ್ಲಿ ಪೊಲೀಸರ ಮೇಲೆ ತಲ್ವಾರ್ ಬೀಸಿರುವ ವಿಡಿಯೋಗಳು ವೈರಲ್ ಆಗತೊಡಗಿವೆ.

ಇನ್ನು ಇದೇ ವೇಳೆ ಕೆಂಪು ಕೋಟೆಯಲ್ಲಿ ತಿರಂಗಾವನ್ನು ಇಳಿಸಿ ರೈತರ ಸೋಗಿನಲ್ಲಿದ್ದವರು ಹಾರಿಸಿದ್ದು ಕೇಸರಿ ಬಣ್ಣದ ನಿಶಾನ್ ಸಾಹಿಬ್ ನ್ನು ಹಾರಿಸಿದ್ದಾರೆ. ಕೆಲವರು ಇದನ್ನು ಖಲಿಸ್ತಾನ ಧ್ವಜ ಎಂದು ಹೇಳುತ್ತಿದ್ದಾರಾದರೂ ಅದು ಖಲಿಸ್ತಾನದ ಧ್ವಜವಲ್ಲ ಬದಲಾಗಿ ಅದು ಸಿಖ್ ಧರ್ಮವನ್ನು ಪ್ರತಿನಿಧಿಸುವ ನಿಶಾನ್ ಸಾಹಿಬ್ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT