ಕೆಂಪು ಕೋಟೆಯ ಮೇಲೆ ಧಾರ್ಮಿಕ ಧ್ವಜ 
ದೇಶ

ಕೆಂಪು ಕೋಟೆ ಮೇಲೆ ಧಾರ್ಮಿಕ ಬಾವುಟ: ಆರೋಪಿಗೆ ಜುಲೈ 20 ರವರೆಗೂ ಬಂಧನದಿಂದ ಕೋರ್ಟ್ ವಿನಾಯಿತಿ

ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆಯ ವೇಳೆ ಕೆಂಪು ಕೋಟೆ ಮೇಲೆ ಧಾರ್ಮಿಕ ಬಾವುಟ ಹಾರಿಸಿದ್ದ ಆರೋಪಿಗೆ ಜು.20 ವರೆಗೂ ಬಂಧನದಿಂದ ವಿನಾಯಿತಿ ನೀಡಲಾಗಿದೆ. 

ನವದೆಹಲಿ: ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆಯ ವೇಳೆ ಕೆಂಪು ಕೋಟೆ ಮೇಲೆ ಧಾರ್ಮಿಕ ಬಾವುಟ ಹಾರಿಸಿದ್ದ ಆರೋಪಿಗೆ ಜು.20 ವರೆಗೂ ಬಂಧನದಿಂದ ವಿನಾಯಿತಿ ನೀಡಲಾಗಿದೆ. 

ದೆಹಲಿ ಕೋರ್ಟ್ ನ ಹೆಚ್ಚುವರಿ ಸೆಷನ್ಸ್ ನ ನ್ಯಾಯಾಧೀಶರಾದ ನಲೋಫಿರ್ ಅಬಿದಾ ಪಿರ್ವೀನ್ ಈ ಆದೇಶ ನೀಡಿದ್ದು, ಆರೋಪಿಗೆ ತನಿಖೆ ಎದುರಿಸುವಂತೆ ಸೂಚಿಸಿದ್ದಾರೆ. 

ಜುಲೈ 8, ಜುಲೈ 11, ಜುಲೈ 15 ರಂದು ಆರೋಪಿಯನ್ನು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ದೆಹಲಿಯ ಜುಗರಾಜ್ ಸಿಂಗ್ ದೆಹಲಿಯ ತೀಸ್ ಹಜಾರಿ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. 

"ಕೆಂಪು ಕೋಟೆ ರಾಷ್ಟ್ರೀಯ ಹೆರಿಟೇಜ್ ಆಗಿದ್ದು, ನಿಶಾನ್ ಸಾಹಿಬ್ ನ್ನು ಆರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವದ ದಿನದಂದು ಕೆಂಪು ಕೋಟೆಯಲ್ಲಿ ದೇಶಕ್ಕೆ ಅವಮಾನ ಮಾಡಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT