ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ 
ದೇಶ

ನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ

ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ.

ನವದೆಹಲಿ: ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ. ಅದರ ಜೊತೆಗೆ ನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜನರು ಸಾಮಾಜಿಕ ಮಾಧ್ಯಮಗಳ ಬೆಳವಣಿಗೆ, ಪ್ರಭಾವದ ಮಧ್ಯೆ ಸರಿ-ತಪ್ಪು, ಒಳ್ಳೆಯದು-ಕೆಟ್ಟದು ಮತ್ತು ನೈಜ ಹಾಗೂ ನಕಲಿಗಳ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯಲು ಅಸಮರ್ಥರಾಗಿ ಹೋಗುತ್ತಿದ್ದಾರೆ ಎಂದು ಸಹ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾಧ್ಯಮ ಪ್ರಯೋಗಗಳು ಮಾರ್ಗದರ್ಶಕ ಅಂಶವಾಗಿರಲು ಸಾಧ್ಯವಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿಗಳು, ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ಸಂಸ್ಥೆಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬ ಬಗ್ಗೆ ಹೇಳಿಕೊಡುವುದು, ಜಾಗೃತಿ ಮೂಡಿಸುವುದು ಸಹ ಕಡ್ಡಾಯವಾಗಿದೆ ಎಂದಿದ್ದಾರೆ.

ನಿನ್ನೆ ದೆಹಲಿಯಲ್ಲಿ ಅವರು 15ನೇ ನ್ಯಾಯಮೂರ್ತಿ ಪಿ ಡಿ ದೇಸಾಯಿ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುವ ವೇಳೆ, ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಾಂಗವು ಸರ್ಕಾರಿ ಅಧಿಕಾರ ಮತ್ತು ಕ್ರಿಯೆಯ ಬಗ್ಗೆ ಪರೀಕ್ಷಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ. ಹಾಗೆಂದು ನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗ ನಿಯಂತ್ರಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT