ಏಮ್ಸ್ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ 
ದೇಶ

ಡೆಲ್ಟಾ ಪ್ಲಸ್ ನಿಂದ ಮರಣ ಪ್ರಮಾಣ ಅಧಿಕ ಎಂಬುದಕ್ಕೆ ಹೆಚ್ಚಿನ ಡಾಟಾ ಇಲ್ಲ: ದೆಹಲಿ ಏಮ್ಸ್ ನಿರ್ದೇಶಕ

ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ಹೆಚ್ಚು ಪರಿಣಾಮಕಾರಿಯಲ್ಲ ಅಥವಾ ಅದರಿಂದ ಮರಣ ಪ್ರಮಾಣ ಪ್ರಮಾಣ ಕಡಿಮೆ ಇದೆ ಎಂಬುದಕ್ಕೆ ನಮ್ಮ ಬಳಿ ಹೆಚ್ಚಿನ ಡಾಟಾ ಇಲ್ಲ ಎಂದು ದೆಹಲಿ ಏಮ್ಸ್ ನ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ. 

ನವದೆಹಲಿ: ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ಹೆಚ್ಚು ಪರಿಣಾಮಕಾರಿಯಲ್ಲ ಅಥವಾ ಅದರಿಂದ ಮರಣ ಪ್ರಮಾಣ ಪ್ರಮಾಣ ಕಡಿಮೆ ಇದೆ ಎಂಬುದಕ್ಕೆ ನಮ್ಮ ಬಳಿ ಹೆಚ್ಚಿನ ಡಾಟಾ ಇಲ್ಲ ಎಂದು ದೆಹಲಿ ಏಮ್ಸ್ ನ ನಿರ್ದೇಶಕ ಡಾ. ರಣ್ದೀಪ್ ಗುಲೇರಿಯಾ ಹೇಳಿದ್ದಾರೆ. 

ಕೋವಿಡ್-19 ಗೆ ಸಂಬಂಧಿಸಿದಂತೆ ಸರಿಯಾದ ರೀತಿಯ ನಡಾವಳಿಕೆಯನ್ನು ಜನತೆ ಪಾಲಿಸಿದಲ್ಲಿ ಹಾಗೂ ಕೋವಿಡ್-19 ಲಸಿಕೆ ಪಡೆದುಕೊಂಡಲ್ಲಿ ಅಂತಹ ವ್ಯಕ್ತಿಗಳು ಯಾವುದೇ ರೂಪಾಂತರಿಯಿಂದಲೂ ಸುರಕ್ಷಿತವಾಗಿರಬಲ್ಲರು ಎಂದು ರಣ್ ದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ. 

ಡೆಲ್ಟಾ ಹೆಚ್ಚು ಸೋಂಕು ಉಂಟು ಮಾಡಬಲ್ಲದು ಎಂಬುದಕ್ಕಾಗಲೀ, ಅದರಿಂದ ಹೆಚ್ಚು ಸಾವು ಸಂಭವಿಸುತ್ತದೆ ಎಂಬುದಕ್ಕಾಗಲೀ, ಅಥವಾ ರೋಗನಿರೋಧಕ ಶಕ್ತಿಯನ್ನೂ ಮೀರಿ ಸೋಂಕು ವ್ಯಾಪಿಸುತ್ತದೆ ಎಂಬುದಕ್ಕಾಗಲೀ ಈವರೆಗೂ ಹೆಚ್ಚಿನ ಡಾಟಾ ಲಭ್ಯವಿಲ್ಲ. ಆದರೆ ಕೋವಿಡ್-19 ಬಾರದಂತೆ ಎಚ್ಚರಿಕೆ ವಹಿಸಬಲ್ಲ ನಡಾವಳಿಕೆಯನ್ನು ಜನ ಪಾಲಿಸಿದರೆ ಯಾವುದೇ ರೂಪಾಂತರಿಗಳಿಂದಲೂ ಸುರಕ್ಷಿತವಾಗಿರಬಹುದು ಎಂದು ಗುಲೇರಿಯಾ ಎಎನ್ಐಗೆ ತಿಳಿಸಿದ್ದಾರೆ. 

ವೈದ್ಯರ ದಿನಾಚರಣೆ ಅಂಗವಾಗಿ ಏಮ್ಸ್ ನಿರ್ದೇಶಕರು ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಜೀವ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ಸ್ಮರಿಸಿದ್ದಾರೆ. 

ವೈದ್ಯರು ಒಂದು ವರ್ಷದಿಂದ ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಜೀವ ಕಳೆದುಕೊಂಡ ವ್ಯಕ್ತಿಗಳನ್ನು ಸ್ಮರಿಸಬೇಕು, ಅಂತೆಯೇ ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗದಂತೆ ಗಮನ ಹರಿಸಬೇಕು" ಎಂದು  ಗುಲೇರಿಯಾ ಕರೆ ನೀಡಿದ್ದಾರೆ. ಇದೇ ವೇಳೆ ವೈದ್ಯರ ಮೇಲೆ ಹಿಂಸಾಚಾರ ಹೆಚ್ಚುತ್ತಿರುವುದರ ಬಗ್ಗೆಯೂ ಡಾ.ಗುಲೇರಿಯಾ ಧ್ವನಿ ಎತ್ತಿದ್ದು, "ಈ ರೀತಿಯ ಘಟನೆಗಳು ವೈದ್ಯ ಸಮೂಹದ ಆತ್ಮವಿಶ್ವಾಸವನ್ನೇ ಕುಗ್ಗಿಸುತ್ತಿದೆ" ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT