ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ 
ದೇಶ

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ

ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. 

ನವದೆಹಲಿ: ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆಯನ್ನು ಭಾಗಿಯಾಗಿದ್ದ 26 ವರ್ಷದ ಬೂಟಾ ಸಿಂಗ್ ಪೊಲೀಸ್ ಕಸ್ಟಡಿ ಮುಂದುವರೆಯಲ್ಪಿದ್ದು, ಹಿಂಸಾಚಾರ, ಪ್ರತಿಭಟನೆಗೆ ಆರ್ಥಿಕ ನೆರವಿನ ಮೂಲದ ತನಿಖೆ ನಡೆಸಲಿದ್ದಾರೆ. 

ಆರೋಪಿ ಬೂಟಾ ಸಿಂಗ್ ರೈತರ ಪ್ರತಿಭಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದ. ಆತನನ್ನು ಪಂಜಾಬ್ ನ ಟಾರ್ನ್ ತರನ್ ಪ್ರದೇಶದಿಂದ ಬಂಧಿಸಲಾಗಿತ್ತು. ಸತತ 5 ತಿಂಗಳ ಕಾಲ ಆತ ತಲೆಮರೆಸಿಕೊಂಡಿದ್ದ ಬೂಟಾ ಸಿಂಗ್ ತಲೆಗೆ 50,000 ರೂಪಾಯಿ ಬಹುಮಾನವಿತ್ತು.

ಮ್ಯಾಜಿಸ್ಟ್ರೇಟ್ ಶಿವ್ಲಿ ತಲ್ವಾರ್ ಗೆ ಪೊಲೀಸರು ಆರೋಪಿಯ ಕುರಿತು ಮಾಹಿತಿ ನೀಡಿದ್ದು, ಆರೋಪಿಯನ್ನು ವಿಚಾರಣೆಗಾಗಿ ಟಾರ್ನ್ ತರನ್ ಗೆ ಕರೆದೊಯ್ಯುವುದಾಗಿ ಮಾಹಿತಿ ನೀಡಿದ್ದಾರೆ. 

ಆತನ ಊರಿನಲ್ಲಿ ಆತನ ವಿಚಾರಣೆಯಿಂದ ಪಿತೂರಿಗೆ ಆರ್ಥಿಕ ನೆರವಿನ ಮೂಲ, ಬ್ಯಾಂಕ್ ಖಾತೆಗಳ ವಿವರ, ಸಾಮಾಜಿಕ ಜಾಲತಾಣ ಖಾತೆಯ ಮಾಹಿತಿಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

ಹೈದರಾಬಾದ್: ಫಾರಿನ್ ಬ್ಯೂಟಿ ಜೊತೆ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಯಶಸ್ವಿ ಜೈಸ್ವಾಲ್! ಡೇಟಿಂಗ್ ಮಾಡ್ತಿದ್ದಾರಾ? Video

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

SCROLL FOR NEXT