ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ 
ದೇಶ

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ

ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. 

ನವದೆಹಲಿ: ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆಯನ್ನು ಭಾಗಿಯಾಗಿದ್ದ 26 ವರ್ಷದ ಬೂಟಾ ಸಿಂಗ್ ಪೊಲೀಸ್ ಕಸ್ಟಡಿ ಮುಂದುವರೆಯಲ್ಪಿದ್ದು, ಹಿಂಸಾಚಾರ, ಪ್ರತಿಭಟನೆಗೆ ಆರ್ಥಿಕ ನೆರವಿನ ಮೂಲದ ತನಿಖೆ ನಡೆಸಲಿದ್ದಾರೆ. 

ಆರೋಪಿ ಬೂಟಾ ಸಿಂಗ್ ರೈತರ ಪ್ರತಿಭಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದ. ಆತನನ್ನು ಪಂಜಾಬ್ ನ ಟಾರ್ನ್ ತರನ್ ಪ್ರದೇಶದಿಂದ ಬಂಧಿಸಲಾಗಿತ್ತು. ಸತತ 5 ತಿಂಗಳ ಕಾಲ ಆತ ತಲೆಮರೆಸಿಕೊಂಡಿದ್ದ ಬೂಟಾ ಸಿಂಗ್ ತಲೆಗೆ 50,000 ರೂಪಾಯಿ ಬಹುಮಾನವಿತ್ತು.

ಮ್ಯಾಜಿಸ್ಟ್ರೇಟ್ ಶಿವ್ಲಿ ತಲ್ವಾರ್ ಗೆ ಪೊಲೀಸರು ಆರೋಪಿಯ ಕುರಿತು ಮಾಹಿತಿ ನೀಡಿದ್ದು, ಆರೋಪಿಯನ್ನು ವಿಚಾರಣೆಗಾಗಿ ಟಾರ್ನ್ ತರನ್ ಗೆ ಕರೆದೊಯ್ಯುವುದಾಗಿ ಮಾಹಿತಿ ನೀಡಿದ್ದಾರೆ. 

ಆತನ ಊರಿನಲ್ಲಿ ಆತನ ವಿಚಾರಣೆಯಿಂದ ಪಿತೂರಿಗೆ ಆರ್ಥಿಕ ನೆರವಿನ ಮೂಲ, ಬ್ಯಾಂಕ್ ಖಾತೆಗಳ ವಿವರ, ಸಾಮಾಜಿಕ ಜಾಲತಾಣ ಖಾತೆಯ ಮಾಹಿತಿಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!

ಮಹಾ'ಸಂಚಲನ: ರಾಷ್ಟ್ರ ರಾಜಕಾರಣಕ್ಕೆ ದೇವೇಂದ್ರ ಫಡ್ನವಿಸ್ ಶಿಫ್ಟ್?