ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ 
ದೇಶ

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ

ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. 

ನವದೆಹಲಿ: ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆಯನ್ನು ಭಾಗಿಯಾಗಿದ್ದ 26 ವರ್ಷದ ಬೂಟಾ ಸಿಂಗ್ ಪೊಲೀಸ್ ಕಸ್ಟಡಿ ಮುಂದುವರೆಯಲ್ಪಿದ್ದು, ಹಿಂಸಾಚಾರ, ಪ್ರತಿಭಟನೆಗೆ ಆರ್ಥಿಕ ನೆರವಿನ ಮೂಲದ ತನಿಖೆ ನಡೆಸಲಿದ್ದಾರೆ. 

ಆರೋಪಿ ಬೂಟಾ ಸಿಂಗ್ ರೈತರ ಪ್ರತಿಭಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದ. ಆತನನ್ನು ಪಂಜಾಬ್ ನ ಟಾರ್ನ್ ತರನ್ ಪ್ರದೇಶದಿಂದ ಬಂಧಿಸಲಾಗಿತ್ತು. ಸತತ 5 ತಿಂಗಳ ಕಾಲ ಆತ ತಲೆಮರೆಸಿಕೊಂಡಿದ್ದ ಬೂಟಾ ಸಿಂಗ್ ತಲೆಗೆ 50,000 ರೂಪಾಯಿ ಬಹುಮಾನವಿತ್ತು.

ಮ್ಯಾಜಿಸ್ಟ್ರೇಟ್ ಶಿವ್ಲಿ ತಲ್ವಾರ್ ಗೆ ಪೊಲೀಸರು ಆರೋಪಿಯ ಕುರಿತು ಮಾಹಿತಿ ನೀಡಿದ್ದು, ಆರೋಪಿಯನ್ನು ವಿಚಾರಣೆಗಾಗಿ ಟಾರ್ನ್ ತರನ್ ಗೆ ಕರೆದೊಯ್ಯುವುದಾಗಿ ಮಾಹಿತಿ ನೀಡಿದ್ದಾರೆ. 

ಆತನ ಊರಿನಲ್ಲಿ ಆತನ ವಿಚಾರಣೆಯಿಂದ ಪಿತೂರಿಗೆ ಆರ್ಥಿಕ ನೆರವಿನ ಮೂಲ, ಬ್ಯಾಂಕ್ ಖಾತೆಗಳ ವಿವರ, ಸಾಮಾಜಿಕ ಜಾಲತಾಣ ಖಾತೆಯ ಮಾಹಿತಿಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT