ಗಣರಾಜ್ಯೋತ್ಸವ ದಿನಾಚರಣೆ ದಿನದಂದು ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ 
ದೇಶ

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ

ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. 

ನವದೆಹಲಿ: ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ. ಕೆಂಪು ಕೋಟೆಯಲ್ಲಿ ಪ್ರತಿಭಟನೆಯನ್ನು ಭಾಗಿಯಾಗಿದ್ದ 26 ವರ್ಷದ ಬೂಟಾ ಸಿಂಗ್ ಪೊಲೀಸ್ ಕಸ್ಟಡಿ ಮುಂದುವರೆಯಲ್ಪಿದ್ದು, ಹಿಂಸಾಚಾರ, ಪ್ರತಿಭಟನೆಗೆ ಆರ್ಥಿಕ ನೆರವಿನ ಮೂಲದ ತನಿಖೆ ನಡೆಸಲಿದ್ದಾರೆ. 

ಆರೋಪಿ ಬೂಟಾ ಸಿಂಗ್ ರೈತರ ಪ್ರತಿಭಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದ. ಆತನನ್ನು ಪಂಜಾಬ್ ನ ಟಾರ್ನ್ ತರನ್ ಪ್ರದೇಶದಿಂದ ಬಂಧಿಸಲಾಗಿತ್ತು. ಸತತ 5 ತಿಂಗಳ ಕಾಲ ಆತ ತಲೆಮರೆಸಿಕೊಂಡಿದ್ದ ಬೂಟಾ ಸಿಂಗ್ ತಲೆಗೆ 50,000 ರೂಪಾಯಿ ಬಹುಮಾನವಿತ್ತು.

ಮ್ಯಾಜಿಸ್ಟ್ರೇಟ್ ಶಿವ್ಲಿ ತಲ್ವಾರ್ ಗೆ ಪೊಲೀಸರು ಆರೋಪಿಯ ಕುರಿತು ಮಾಹಿತಿ ನೀಡಿದ್ದು, ಆರೋಪಿಯನ್ನು ವಿಚಾರಣೆಗಾಗಿ ಟಾರ್ನ್ ತರನ್ ಗೆ ಕರೆದೊಯ್ಯುವುದಾಗಿ ಮಾಹಿತಿ ನೀಡಿದ್ದಾರೆ. 

ಆತನ ಊರಿನಲ್ಲಿ ಆತನ ವಿಚಾರಣೆಯಿಂದ ಪಿತೂರಿಗೆ ಆರ್ಥಿಕ ನೆರವಿನ ಮೂಲ, ಬ್ಯಾಂಕ್ ಖಾತೆಗಳ ವಿವರ, ಸಾಮಾಜಿಕ ಜಾಲತಾಣ ಖಾತೆಯ ಮಾಹಿತಿಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT