ದೇಶ

ಹರಿಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ತಿಹಾರ್ ಜೈಲಿನಿಂದ ಬಿಡುಗಡೆ

ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಹರಿಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ತಿಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನವದೆಹಲಿ: ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಹರಿಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ತಿಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಾರಾಗೃಹದ ನಿಯಮಗಳ ಔಪಚಾರಿಕತೆಗಳನ್ನು ಪೂರೈಸಿದ ನಂತರ ಶುಕ್ರವಾರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

86 ವರ್ಷದ ಚೌಟಾಲಾ ಈಗಾಗಲೇ ಪೆರೋಲ್ ಮೇಲೆ ಹೊರಗಿದ್ದರು, ಶುಕ್ರವಾರ ಔಪಚಾರಿಕ ನಿಯಮಗಳನ್ನು ಪೂರೈಸಿ ಬಿಡುಗಡೆ ಮಾಡಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಒಂಬತ್ತುವರೆ ವರ್ಷ ಜೈಲು ವಾಸ ಪೂರೈಸಿದ ಕೈದಿಗಳಿಗೆ ಆರು ತಿಂಗಳ ವಿನಾಯಿತಿ ನೀಡುವಂತೆ ಕಳೆದ ವರ್ಷ ದೆಹಲಿ ಸರ್ಕಾರ ಆದೇಶ ಹೊರಡಿಸಿತ್ತು, ಅದರಂತೆ ಬಿಡುಗಡೆ ಮಾಡಿದ್ದೇವೆ ಎಂದು ಕಾರಾಗೃಹ ಐಜಿಪಿ ಸಂದೀಪ್ ಗೋಯೆಲ್ ತಿಳಿಸಿದ್ದಾರೆ.

ಓಂಪ್ರಕಾಶ್ ಚೌಟಾಲಾ ಅವರು ಈಗಾಗಲೇ 9 ವರ್ಷ 9 ತಿಂಗಳು ಜೈಲುವಾಸ ಪೂರ್ಣಗೊಳಿಸಿದ್ದಾರೆ, ಶಿಕ್ಷಕರ ನೇಮಕಾತಿ ಹಗರಣದಲ್ಲಿ ಅವರು 2013 ರಲ್ಲಿ ಜೈಲು ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT