ಜಾರಿ ನಿರ್ದೇಶನಾಲಯ 
ದೇಶ

ಧಾರ್ಮಿಕ ಮತಾಂತರ ಪ್ರಕರಣ: ದೆಹಲಿ, ಉತ್ತರ ಪ್ರದೇಶಗಳಲ್ಲಿ ಇ.ಡಿ ದಾಳಿ

ವಿದೇಶಗಳಿಂದ ಹಣ ಪಡೆದು ಶ್ರವಣ ದೋಷವುಳ್ಳ ವಿದ್ಯಾರ್ಥಿಗಳು ಹಾಗೂ ಬಡವರನ್ನು ಇಸ್ಲಾಮ್ ಗೆ ಮತಾಂತರಗೊಳಿಸುತ್ತಿದ್ದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಉತ್ತರ ಪ್ರದೇಶ, ದೆಹಲಿಗಳಲ್ಲಿ ದಾಳಿ ನಡೆಸಿದೆ. 

ನವದೆಹಲಿ: ವಿದೇಶಗಳಿಂದ ಹಣ ಪಡೆದು ಶ್ರವಣ ದೋಷವುಳ್ಳ ವಿದ್ಯಾರ್ಥಿಗಳು ಹಾಗೂ ಬಡವರನ್ನು ಇಸ್ಲಾಮ್ ಗೆ ಮತಾಂತರಗೊಳಿಸುತ್ತಿದ್ದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಉತ್ತರ ಪ್ರದೇಶ, ದೆಹಲಿಗಳಲ್ಲಿ ದಾಳಿ ನಡೆಸಿದೆ. 

6 ಪ್ರದೇಶಗಳಲ್ಲಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ಬೇಧಿಸಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. 
    
ಎಟಿಎಸ್ ನಿಂದ ಬಂಧನಕ್ಕೊಳಗಾಗಿದ್ದ ಇಬ್ಬರು ಪುರುಷರು, ದೆಹಲಿಯ ಜಾಮಿಯಾ ನಗರದ ಇಸ್ಲಾಮಿಕ್ ದವಾಹ್ ಕೇಂದ್ರ ಎಂಬ ಸಂಘಟನೆಯನ್ನು ನಡೆಸುತ್ತಿದ್ದರು. ಈ ಸಂಘಟನೆಯ ಮೂಲಕ ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟಲಿಜೆನ್ಸ್ ಮತ್ತು ಇತರ ವಿದೇಶಿ ಏಜೆನ್ಸಿಗಳ ಮೂಲಕ ಆರ್ಥಿಕ ನೆರವನ್ನು ಪಡೆದು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಬಂಧಿತರನ್ನು 
ಮುಫ್ತಿ ಖಾಜಿ ಜಹಾಂಗೀರ್ ಆಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT