ಬಿಜೆಪಿ ಬಾವುಟ 
ದೇಶ

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆ: 75 ಜೆಲ್ಲೆಗಳ ಪೈಕಿ 67ರಲ್ಲಿ ಬಿಜೆಪಿಗೆ ಜಯ, ಕೇವಲ 6ರಲ್ಲಿ ಎಸ್ಪಿ ಜಯ, ತೀವ್ರ ಮುಖಭಂಗ

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರಿ ಜಯ ಸಾಧಿಸಿದ್ದು, ಸಮಾಜವಾದಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದೆ.

ಲಖನೌ: ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರಿ ಜಯ ಸಾಧಿಸಿದ್ದು, ಸಮಾಜವಾದಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದೆ.

ಉತ್ತರ ಪ್ರದೇಶದ 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿನ ಆಡಳಿತಾರೂಢ ಬಿಜೆಪಿಯು 67ರಲ್ಲಿ ಜಯ ಗಳಿಸಿದೆ. ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಾರ್ಟಿಯು ಕೇವಲ 6 ಜಿಲ್ಲೆಗಳಲ್ಲಿ ಜಯ ಗಳಿಸಿದೆ.

21 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ್ತು ಒಂದು ಜಿಲ್ಲೆಯಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಯಾವತಿ ಅವರ ಬಹುಜನ ಸಮಾಜ ಪಾರ್ಟಿಯು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ''ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರದ  ಆಡಳಿತವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಪಂಚಾಯಿತಿ ಫಲಿತಾಂಶ ಸಾಕ್ಷಿ. ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸುತ್ತೇವೆ. ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪ್ರಧಾನಿ, ಮುಖ್ಯಮಂತ್ರಿಯವರ ಜನಪ್ರಿಯತೆ ಕಾರಣದಿಂದ ಈ ಗೆಲುವು  ಲಭಿಸಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರದೇವ್‌ ಸಿಂಗ್‌ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆಯು ವಿಧಾನಸಭೆ ಚುನಾವಣೆ ದಿಕ್ಸೂಚಿಯಲ್ಲ, ಏಕೆಂದರೆ ಆಡಳಿತಾರೂಢ ಪಕ್ಷವೇ ಜಯ ಗಳಿಸುವುದು ಸಾಮಾನ್ಯ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ 2016ರಲ್ಲಿ ಅಂದು ಅಧಿಕಾರದಲ್ಲಿದ್ದ ಸಮಾಜವಾದಿ ಪಾರ್ಟಿಯು 60 ಜಿಲ್ಲೆಗಳ  ಪಂಚಾಯಿತಿಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿತ್ತು. ಆಗ ಅಖಿಲೇಶ್‌ ಯಾದವ್‌ ಮುಖ್ಯಮಂತ್ರಿಯಾಗಿದ್ದರು. ಮರುವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು!

ಮತ ಎಣಿಕೆ ವೇಳೆ ಬಿಜೆಪಿ ಮುಂಚೂಣಿಯಲ್ಲಿರುವ ಟ್ರೆಂಡ್‌ ತಿಳಿಯುತ್ತಲೇ ಸಮಾಜವಾದಿ ಪಾರ್ಟಿ ಕಾರ್ಯಕರ್ತರು, ''ಬಿಜೆಪಿಯು ಚುನಾವಣೆ ಅಕ್ರಮ ನಡೆಸಿದೆ,'' ಎಂದು ಆರೋಪಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರು. ಆ ಪೈಕಿ ಪ್ರಯಾಗ್‌ರಾಜ್‌ನಲ್ಲಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ  ಪ್ರಹಾರ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT