ದೇಶ

ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ 

Sumana Upadhyaya

ಡೆಹ್ರಾಡೂನ್: ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ ಧಮಿ, ಕೆಲ ಹೊತ್ತು ಮಾತುಕತೆ ನಡೆಸಿದರು.

ನಿನ್ನೆ ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷ ಧಮಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಿತ್ತು. ಖಾತಿಮ ಕ್ಷೇತ್ರದಿಂದ ಧಮಿಯವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಾಂವಿಧಾನಿಕ ವಿಚಾರಗಳ ಹಿನ್ನೆಲೆಯಲ್ಲಿ ಮೊನ್ನೆ ಶುಕ್ರವಾರ ಸಾಯಂಕಾಲ ತಿರಂತ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದರು.

SCROLL FOR NEXT