ರೈತರ ಪ್ರತಿಭಟನೆ ಸಾಂದರ್ಭಿಕ ಚಿತ್ರ 
ದೇಶ

ಮುಂಗಾರು ಅಧಿವೇಶನ ವೇಳೆ ಸಂಸತ್ ಹೊರಗೆ ರೈತರ ಪ್ರತಿಭಟನೆ

ಮುಂಗಾರು ಅಧಿವೇಶನದ ವೇಳೆ ಪ್ರತಿದಿನ ಸಂಸತ್ ಹೊರಗೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 200 ರೈತರ ಗುಂಪೊಂದು ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಪ್ರಕಟಿಸಿದೆ

ನವದೆಹಲಿ: ಮುಂಗಾರು ಅಧಿವೇಶನದ ವೇಳೆ ಪ್ರತಿದಿನ ಸಂಸತ್ ಹೊರಗೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 200 ರೈತರ ಗುಂಪೊಂದು ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಹೇಳಿದೆ.

ಸಂಸತ್ತಿನ ಒಳಗಡೆ ಪ್ರತಿಭಟನೆ ನಡೆಸುವಂತೆ ಮುಂಗಾರು ಅಧಿವೇಶನ ಆರಂಭವಾಗುವ ಎರಡು ದಿನ ಮುನ್ನ ಎಲ್ಲಾ ಪ್ರತಿಪಕ್ಷಗಳ ಸಂಸದರಿಗೆ ಎಚ್ಚರಿಕೆ ಪತ್ರ ನೀಡಲಾಗುವುದು ಎಂದು 40 ರೈತ ಯೂನಿಯನ್ ಗಳನ್ನು ಒಳಗೊಂಡ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿತು. 

ಸಂಸತ್ ಹೊರಗಡೆ ನಾವು ಪ್ರತಿಭಟನೆ ನಡೆಸುತ್ತಿದ್ದರೆ ಒಳಗಡೆ ಪ್ರತಿದಿನ ಪ್ರತಿಭಟನೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರಿಗೆ ಹೇಳುತ್ತೇವೆ. ಅಧಿವೇಶನದಿಂದ ಹೊರನಡೆಯುವ ಮೂಲಕ ಕೇಂದ್ರಕ್ಕೆ ಪ್ರಯೋಜನವಾಗದಂತೆ ನಾವು ಅವರಿಗೆ ಹೇಳುತ್ತೇವೆ. ಸರ್ಕಾರವು ಸಮಸ್ಯೆಯನ್ನು ಬಗೆಹರಿಸುವವರೆಗೆ ಅಧಿವೇಶನವನ್ನು ನಡೆಸಲು ಬಿಡಬೇಡಿ ಎಂದು ರೈತ ಮುಖಂಡ ಗುರ್ನಾಮ್ ಸಿಂಗ್ ಚಾರುಣಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT