ರೈತರ ಪ್ರತಿಭಟನೆ ಸಾಂದರ್ಭಿಕ ಚಿತ್ರ 
ದೇಶ

ಮುಂಗಾರು ಅಧಿವೇಶನ ವೇಳೆ ಸಂಸತ್ ಹೊರಗೆ ರೈತರ ಪ್ರತಿಭಟನೆ

ಮುಂಗಾರು ಅಧಿವೇಶನದ ವೇಳೆ ಪ್ರತಿದಿನ ಸಂಸತ್ ಹೊರಗೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 200 ರೈತರ ಗುಂಪೊಂದು ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಪ್ರಕಟಿಸಿದೆ

ನವದೆಹಲಿ: ಮುಂಗಾರು ಅಧಿವೇಶನದ ವೇಳೆ ಪ್ರತಿದಿನ ಸಂಸತ್ ಹೊರಗೆ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 200 ರೈತರ ಗುಂಪೊಂದು ಪ್ರತಿಭಟನೆ ನಡೆಸಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಹೇಳಿದೆ.

ಸಂಸತ್ತಿನ ಒಳಗಡೆ ಪ್ರತಿಭಟನೆ ನಡೆಸುವಂತೆ ಮುಂಗಾರು ಅಧಿವೇಶನ ಆರಂಭವಾಗುವ ಎರಡು ದಿನ ಮುನ್ನ ಎಲ್ಲಾ ಪ್ರತಿಪಕ್ಷಗಳ ಸಂಸದರಿಗೆ ಎಚ್ಚರಿಕೆ ಪತ್ರ ನೀಡಲಾಗುವುದು ಎಂದು 40 ರೈತ ಯೂನಿಯನ್ ಗಳನ್ನು ಒಳಗೊಂಡ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿತು. 

ಸಂಸತ್ ಹೊರಗಡೆ ನಾವು ಪ್ರತಿಭಟನೆ ನಡೆಸುತ್ತಿದ್ದರೆ ಒಳಗಡೆ ಪ್ರತಿದಿನ ಪ್ರತಿಭಟನೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರಿಗೆ ಹೇಳುತ್ತೇವೆ. ಅಧಿವೇಶನದಿಂದ ಹೊರನಡೆಯುವ ಮೂಲಕ ಕೇಂದ್ರಕ್ಕೆ ಪ್ರಯೋಜನವಾಗದಂತೆ ನಾವು ಅವರಿಗೆ ಹೇಳುತ್ತೇವೆ. ಸರ್ಕಾರವು ಸಮಸ್ಯೆಯನ್ನು ಬಗೆಹರಿಸುವವರೆಗೆ ಅಧಿವೇಶನವನ್ನು ನಡೆಸಲು ಬಿಡಬೇಡಿ ಎಂದು ರೈತ ಮುಖಂಡ ಗುರ್ನಾಮ್ ಸಿಂಗ್ ಚಾರುಣಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ