ದೆಹಲಿ ಮುಖ್ಯಮಂತ್ರಿ ಅರವಿಂದ 
ದೇಶ

ಕೋವಿಡ್-19 ವಿರುದ್ಧ ಹೋರಾಟ ಮಾಡುತ್ತಿರುವ ಭಾರತೀಯ ವೈದ್ಯರಿಗೆ 'ಭಾರತ ರತ್ನ' ನೀಡಿ: ಕೇಜ್ರಿವಾಲ್ ಆಗ್ರಹ

ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ಭಾರತೀಯ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಭಾರತ ರತ್ನ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಆಗ್ರಹಿಸಿದ್ದಾರೆ. 

ಲಖನೌ: ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ಭಾರತೀಯ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಭಾರತ ರತ್ನ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಆಗ್ರಹಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡ ವೈದ್ಯರಿಗೆ ಭಾರತ್ ರತ್ನ ಒಂದು ನಿಜವಾದ ಗೌರವಾಗಿದೆ ಎಂದು ಹೇಳಿದ್ದಾರೆ. 

ಪ್ರಸಕ್ತ ಸಾಲಿನಲ್ಲಿ ಭಾರತೀಯ ವೈದ್ಯರಿಗೆ ಭಾರತ ರತ್ನ ನೀಡಿ ಗೌರವಿಸಬೇಕಿದೆ. ಭಾರತೀಯ ವೈದ್ಯರು ಎಂದರೆ, ಎಲ್ಲಾ ವೈದ್ಯರು, ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿಗಳೆಲ್ಲರೂ ಸೇರುತ್ತಾರೆ. ಹುತಾತ್ಮರಾದ ವೈದ್ಯರಿಗೆ ಇದು ನಿಜವಾದ ಗೌರವವಾಗಿರುತ್ತದೆ. ತಮ್ಮ ಜೀವ ಮತ್ತು ಕುಟುಂಬದ ಬಗ್ಗೆ ಚಿಂತಿಸದೆ ಸೇವೆ ಸಲ್ಲಿಸುವವರಿಗೆ ಇದು ಗೌರವವಾಗಿರುತ್ತದೆ. ಸರ್ಕಾರ ಈ ಕಾರ್ಯಕ್ಕೆ ಇಡೀ ದೇಶ ಸಂತಸ ಪಡುತ್ತದೆ ಎಂದು ತಿಳಿಸಿದ್ದಾರೆ. 

ಕೊರೋನಾ 2ನೇ ಅಲೆಯಲ್ಲಿ ದೇಶದಾದ್ಯಂತ ಜೂನ್ 30ರವರೆಗೆ 798 ವೈದ್ಯರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆಂದು ಭಾರತೀಯ ವೈದ್ಯಕೀಯ ಸಂಸ್ಥೆ ಮಾಹಿತಿ ನೀಡಿದೆ. ದೆಹಲಿಯಲ್ಲಿ 128 ವೈದ್ಯರು ಹಾಗೂ ಬಿಹಾರ ರಾಜ್ಯದಲ್ಲಿ 115 ವೈದ್ಯರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

ಚಳಿಗಾಲದ ಅಧಿವೇಶನ ಸಂಪನ್ನ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಗಣನೀಯ ಅನುದಾನ; ವಿಪಕ್ಷಗಳ ಗದ್ದಲದ ನಡುವೆಯೆ ಮಸೂದೆಗಳ ಅಂಗೀಕಾರ

ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್‌ಡಿ ದೇವೇಗೌಡ ಒತ್ತಾಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!

SCROLL FOR NEXT