ಲಕ್ಷದ್ವೀಪ (ಸಾಂಕೇತಿಕ ಚಿತ್ರ) 
ದೇಶ

ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಸದರಿಗೆ ಪ್ರವೇಶ ನಿರಾಕರಣೆ!

ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಶದರಿಗೆ ಸ್ಥಳೀಯ ಆಡಳಿತ ಪ್ರವೇಶವನ್ನು ನಿರಾಕರಣೆ ಮಾಡಿದೆ. 

ನವದೆಹಲಿ: ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಶದರಿಗೆ ಸ್ಥಳೀಯ ಆಡಳಿತ ಪ್ರವೇಶವನ್ನು ನಿರಾಕರಣೆ ಮಾಡಿದೆ. 

ಕೇಂದ್ರಾಡಳಿತ ಪ್ರದೇಶಕ್ಕೆ ಕಾಂಗ್ರೆಸ್ ಸಂಸದರು ಭೇಟಿ ನೀಡಿದರೆ ಶಾಂತಿಯುತ ವಾತಾವರಣ ಹಾಳಾಗಲಿದೆ ಎಂಬ ಕಾರಣ ನೀಡಿ ಲಕ್ಷದ್ವೀಪ ಆಡಳಿತ ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಹಾಗೂ ಟಿ.ಎನ್.ಪ್ರತಾಪನ್ ಅವರ ಭೇಟಿ ಅರ್ಜಿಯನ್ನು ತಿರಸ್ಕರಿಸಿದೆ.

ಸಂಸದರ ಭೇಟಿ ಉದ್ದೇಶಪೂರ್ವಕವಾಗಿ ಶಾಂತಿಯನ್ನು ಕದಡುವ ಪ್ರಯತ್ನವಾಗಿದ್ದು, ಕೋವಿಡ್-19 ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆಡಳಿತ ಸಮರ್ಥನೆ ನೀಡಿದೆ.

ಸಂಸದರ ಭೇಟಿಯ ಉದ್ದೇಶ, ದ್ವೀಪ ಜನರಿಗೆ ಹೊಸ ಆಡಳಿತದಿಂದ ಜನರ ಸಮಸ್ಯೆಗೆ ಆಲಿಸುವುದಕ್ಕಾಗಿಯಾಗಿದ್ದು, ಇದು ರಾಜಕೀಯ ಕ್ರಮ ಎಂದೆನಿಸುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ. ಕಳೆದ ತಿಂಗಳು ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಜಾರಿಗೆ ತಂದಿದ್ದ ಸುಧಾರಣೆಗಳ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT