ಲಕ್ಷದ್ವೀಪ (ಸಾಂಕೇತಿಕ ಚಿತ್ರ) 
ದೇಶ

ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಸದರಿಗೆ ಪ್ರವೇಶ ನಿರಾಕರಣೆ!

ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಶದರಿಗೆ ಸ್ಥಳೀಯ ಆಡಳಿತ ಪ್ರವೇಶವನ್ನು ನಿರಾಕರಣೆ ಮಾಡಿದೆ. 

ನವದೆಹಲಿ: ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಸಂಶದರಿಗೆ ಸ್ಥಳೀಯ ಆಡಳಿತ ಪ್ರವೇಶವನ್ನು ನಿರಾಕರಣೆ ಮಾಡಿದೆ. 

ಕೇಂದ್ರಾಡಳಿತ ಪ್ರದೇಶಕ್ಕೆ ಕಾಂಗ್ರೆಸ್ ಸಂಸದರು ಭೇಟಿ ನೀಡಿದರೆ ಶಾಂತಿಯುತ ವಾತಾವರಣ ಹಾಳಾಗಲಿದೆ ಎಂಬ ಕಾರಣ ನೀಡಿ ಲಕ್ಷದ್ವೀಪ ಆಡಳಿತ ಕಾಂಗ್ರೆಸ್ ಸಂಸದರಾದ ಹಿಬಿ ಈಡನ್ ಹಾಗೂ ಟಿ.ಎನ್.ಪ್ರತಾಪನ್ ಅವರ ಭೇಟಿ ಅರ್ಜಿಯನ್ನು ತಿರಸ್ಕರಿಸಿದೆ.

ಸಂಸದರ ಭೇಟಿ ಉದ್ದೇಶಪೂರ್ವಕವಾಗಿ ಶಾಂತಿಯನ್ನು ಕದಡುವ ಪ್ರಯತ್ನವಾಗಿದ್ದು, ಕೋವಿಡ್-19 ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆಡಳಿತ ಸಮರ್ಥನೆ ನೀಡಿದೆ.

ಸಂಸದರ ಭೇಟಿಯ ಉದ್ದೇಶ, ದ್ವೀಪ ಜನರಿಗೆ ಹೊಸ ಆಡಳಿತದಿಂದ ಜನರ ಸಮಸ್ಯೆಗೆ ಆಲಿಸುವುದಕ್ಕಾಗಿಯಾಗಿದ್ದು, ಇದು ರಾಜಕೀಯ ಕ್ರಮ ಎಂದೆನಿಸುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ. ಕಳೆದ ತಿಂಗಳು ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಜಾರಿಗೆ ತಂದಿದ್ದ ಸುಧಾರಣೆಗಳ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT