ಸ್ಟ್ಯಾನ್‌ ಸ್ವಾಮಿ 
ದೇಶ

ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನ

ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ  ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

ಮುಂಬೈ: ಕಳೆದ ವರ್ಷ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಲ್ಪಟ್ಟಿದ್ದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಅವರ ವಕೀಲರು ಸೋಮವಾರ  ಬಾಂಬೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.

84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ ಅವರಿಗೆ ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ಅಳವಡಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ 1:30ಕ್ಕೆ ಸಾವನ್ನಪ್ಪಿದ್ದಾರೆ. ಮೇ 28 ರಂದು ನ್ಯಾಯಾಲಯದ ಆದೇಶದ  ಹಿನ್ನೆಲೆಯಲ್ಲಿ ಸ್ಟಾನ್ ಸ್ವಾಮಿ ಅವರು ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ವಾರ, ಸ್ಟಾನ್ ಸ್ವಾಮಿ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಹೊಸ ಅರ್ಜಿಯನ್ನು ಸಲ್ಲಿಸಿದ್ದರು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ಒಂದು ಸೆಕ್ಷನ್ ಅನ್ನು ಪ್ರಶ್ನಿಸಿದ್ದರು. ಎಲ್ಗಾರ್ ಪ್ರಕರಣದಲ್ಲಿ ಸ್ಟಾನ್ ಸ್ವಾಮಿ ಹಾಗೂ  ಸಹ-ಆರೋಪಿಗಳನ್ನು ನವೀ ಮುಂಬಯಿಯ ತಲೋಜ  ಜೈಲಿನಲ್ಲಿಇರಿಸಲಾಗಿತ್ತು. ಜೈಲಿನಲ್ಲಿ  ಅಸಮರ್ಪಕ ಆರೋಗ್ಯ ಸೌಲಭ್ಯಗಳ ಬಗ್ಗೆ ಸ್ವಾಮಿ ಪದೇ ಪದೇ ದೂರು ನೀಡಿದ್ದರು.

ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟೀಸ್
ಈ ಹಿಂದೆ ಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಅವರ ಆರೋಗ್ಯ ಸ್ಥಿತಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟೀಸ್ ನೀಡಿತ್ತು. ಮಹಾರಾಷ್ಟ್ರದ ತಲೋಜಾ ಕೇಂದ್ರ  ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ಟಾನ್ ಸ್ವಾಮಿ ಅವರನ್ನ ಕೆಲ ವಾರಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಇನ್ನಷ್ಟು ವ್ಯತ್ಯಯವಾಗಿ ನಿನ್ನೆ ಭಾನುವಾರ ಸ್ವಾಮಿ ಅವರಿಗೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ.

ಆದರೆ, ನ್ಯಾಯಾಂಗ ಬಂಧನಕ್ಕೂ  ಮುನ್ನ ಆರೋಗ್ಯವಾಗಿದ್ದ ಸ್ಟ್ಯಾನ್ ಸ್ವಾಮಿ ಅವರ ಸ್ಥಿತಿ ಈ ಮಟ್ಟಕ್ಕೆ ತಲುಪಿರುವ ವಿಚಾರವನ್ನು ಕೆಲ ಸಂಘಟನೆಗಳು ಬಾಂಬೆ ಹೈಕೋರ್ಟ್ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಗಮನಕ್ಕೆ ತಂದಿವೆ. ಮಾನವ ಹಕ್ಕು ಆಯೋಗ ಈ ಸಂಬಂಧ ನಿನ್ನೆ ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು,  ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT