ರಾಜನಾಥ್ ಸಿಂಗ್ 
ದೇಶ

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಎದುರಿಸಲು ಭಾರತ ಸಮರ್ಥ: ರಾಜನಾಥ್‍ ಸಿಂಗ್

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಇಲ್ಲವೇ ಅದರ ತಂತ್ರಜ್ಞಾನವನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇತ್ತೀಚಿನ ಜಮ್ಮು ವಾಯುಪಡೆ ನೆಲೆಯ ಮೇಲೆ ನಡೆದ ಡ್ರೋಣ್ ದಾಳಿಯ ಕುರಿತು ಪ್ರತಿಕ್ರಿಯಿಸಿ ತಿಳಿಸಿದ್ದಾರೆ.

ಕಾನ್ಪುರ್: ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಇಲ್ಲವೇ ಅದರ ತಂತ್ರಜ್ಞಾನವನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇತ್ತೀಚಿನ ಜಮ್ಮು ವಾಯುಪಡೆ ನೆಲೆಯ ಮೇಲೆ ನಡೆದ ಡ್ರೋಣ್ ದಾಳಿಯ ಕುರಿತು ಪ್ರತಿಕ್ರಿಯಿಸಿ ತಿಳಿಸಿದ್ದಾರೆ.

ಡ್ರೋನ್ ದಾಳಿಗಳ ಕುರಿತು ಭಾರತ ಅತ್ಯಾಧುನಿಕ ರೀತಿಯಲ್ಲಿ ಕಾರ್ಯಮಗ್ನವಾಗಿದ್ದು, ಗಡಿಯಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ ಎಂದರು. ಮೂರನೇ ಬಾರಿ ಸರ್ಜಿಕಲ್ ದಾಳಿ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾರತೀಯ ಸೇನೆ ಸದಾ ಕಟ್ಟೆಚ್ಚರದಿಂದ ಇದ್ದು, ಗಡಿಗಳು ಸಂಪೂರ್ಣ ಸುರಕ್ಷಿತವಾಗಿವೆ ಎಂದು ಹೇಳಿದ್ದಾರೆ. 

ಪ್ರತಿಪಕ್ಷಗಳ ಹೇಳಿಕೆಗಳ ಕುರಿತು ಪ್ರತಿಕ್ರಿಸಿದ ರಾಜನಾಥ್ ಸಿಂಗ್, ಕೆಲವರು ಭೀತಿಯ ರಾಜಕಾರಣದಲ್ಲಿ ತೊಡಗಿದ್ದಾರೆ. ಆದರೆ, ಇಂತಹ ರಾಜಕಾರಣ ಮಾಡುವವರರು ಎಂದಿಗೂ ಯಶಸ್ವಿಯಾಗಲಾರರು ಎಂದರು.

ಸಬ್ ಕ ಸಾತ್, ಸಬ್ ಕ ವಿಶ್ವಾಸ್ ನಲ್ಲಿ ಬಿಜೆಪಿ ವಿಶ್ವಾಸವಿಟ್ಟಿದೆ. ಹಿಂದೂ ಅಥವಾ ಮುಸ್ಲೀಂ ಎಂಬ ರೀತಿಯಲ್ಲಿ ಬಿಜೆಪಿ ಎಂದೂ ನಡೆದುಕೊಂಡಿಲ್ಲ. ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ ಎಂಬುದಕ್ಕೆ ಇತ್ತೀಚಿನ ಪಂಚಾಯತ್ ಚುನಾವಣೆಗಳು ನಿದರ್ಶನವಾಗಿವೆ ಎಂದು ಅಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT