ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ 
ದೇಶ

ಸ್ಟಾನ್ ಸ್ವಾಮಿ ಸಾವು: ಇದು 'ನ್ಯಾಯಾಂಗ ಪ್ರಕ್ರಿಯೆಯ ಕೊಲೆ', ಸಾಮಾಜಿಕ ಕಾರ್ಯಕರ್ತರ ಟ್ವೀಟ್

ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ನವದೆಹಲಿ: ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರ ಸಾವಿನ ಬಗ್ಗೆ ಕಾರ್ಯಕರ್ತರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದು ನ್ಯಾಯಾಂಗ ಪ್ರಕ್ರಿಯೆಯ ಕೊಲೆ. ಸರ್ಕಾರವು ಹೊಣೆಗಾರಿಕೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. 

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸ್ವಾಮಿ (84) ಸೋಮವಾರ ಮಧ್ಯಾಹ್ನ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ವೈದ್ಯಕೀಯ ಕಾರಣಗಳಿಗಾಗಿ ಅವರು ಮಧ್ಯಂತರ ಜಾಮೀನುಗಾಗಿ ಕಾಯುತ್ತಿದ್ದರು.

ಎಲ್ಗರ್ ಪರಿಷತ್ ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಕೆಲವು ಕಾರ್ಯಕರ್ತರು ಮಾಡಿದ ದ್ವೇಷಪೂರಿತ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣದಿಂದಾಗಿ ಪಶ್ಚಿಮ ಮಹಾರಾಷ್ಟ್ರ ನಗರ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರಕ್ಕೆ ಕಾರಣವಾಯಿತು. ಮಾವೋವಾದಿ ಸಂಪರ್ಕ ಹೊಂದಿರುವ ಜನರು ಈ ಸಮಾವೇಶವನ್ನು ಆಯೋಜಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಪೊಲಿಟ್‌ಬ್ಯುರೊ ಸದಸ್ಯೆ ಕವಿತಾ ಕೃಷ್ಣನ್, 'ನಾವು ಶೋಕಿಸುತ್ತಿರುವುದು ಫಾದರ್ ಸ್ಟಾನ್ ಗಾಗಿ ಅಲ್ಲ... ಇಂದು ಭಾರತೀಯ ಸಂವಿಧಾನದ ಕೊಲೆ. ನ್ಯಾಯಾಂಗ ಪ್ರಕ್ರಿಯೆಯ ಕೊಲೆಯನ್ನು ನಾವು ಖಂಡಿಸುತ್ತೇವೆ. ತುಳಿತಕ್ಕೊಳಗಾದವರ ಸೇವೆಗಾಗಿ ತಮ್ಮ ಜೀವನವನ್ನು ಕಳೆದ ಸೌಮ್ಯ ಜೆಸ್ಯೂಟ್ ಸಮಾಜ ಸೇವಕ ಫ್ರಾನ್ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಮೋದಿ ಮತ್ತು ಷಾ ಮಾಡಿದ್ದಾರೆ. ಅವರಿಗೆ ಜಾಮೀನು ನಿರಾಕರಿಸಿದ ನ್ಯಾಯಾಧೀಶರು ರಾತ್ರಿಯಲ್ಲಿ ಎಂದಿಗೂ ನಿದ್ರಿಸುವುದಿಲ್ಲ: ಅವರ ಕೈಗಳು ರಕ್ತದಿಂದ ತೊಯ್ದಿವೆ ಎಂದು ಟ್ವೀಟ್ ಮಾಡಿದ್ದಾರೆ. 

ಸಾಮಾಜಿಕ ಕಾರ್ಯಕರ್ತ ಹರ್ಷ್ ಮಾಂಡರ್ ಸ್ವಾಮಿಯ ಸಾವನ್ನು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಕರೆದರು."ಆದಿವಾಸಿ ಹಕ್ಕುಗಳ ನಿಸ್ವಾರ್ಥ ರಕ್ಷಣೆಗೆ ಮೀಸಲಾಗಿದ್ದರು. ಸೌಮ್ಯ, ಧೈರ್ಯಶಾಲಿ, ಜೈಲಿನಲ್ಲಿ ಇದ್ದಾಗಲೂ ಅವರು ತಮಗಾಗಿ ದುಃಖಿಸಲಿಲ್ಲ. ಕ್ರೂರ ರಾಜ್ಯವು ಅವರ ಧ್ವನಿಯನ್ನು ಮೌನಗೊಳಿಸಲು ಜೈಲಿಗೆ ಹಾಕಿತು. ನ್ಯಾಯಾಂಗವು ತನ್ನ ಸ್ವಾತಂತ್ರ್ಯವನ್ನು ಭದ್ರಪಡಿಸಿಕೊಳ್ಳಲು ಏನನ್ನೂ ಮಾಡಲಿಲ್ಲ ಎಂದು ಟ್ವೀಟಿಸಿದ್ದಾರೆ. 

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭರದ್ವಾಜ್ ಸ್ವಾಮಿಯ ಸಾವನ್ನು "ಸಾಂಸ್ಥಿಕ ಕೊಲೆ" ಎಂದು ಬಣ್ಣಿಸಿದರು. ಯುಎಪಿಎಯೊಂದಿಗೆ, ಪ್ರಕ್ರಿಯೆಯು ಶಿಕ್ಷೆಯಾಗಿದೆ. 84 ವರ್ಷದ ಫಾದರ್ ಸ್ಟಾನ್ ಸ್ವಾಮಿಯವರ ಸಾವು ಸಾಂಸ್ಥಿಕ ಕೊಲೆ ಎಂದು ಗುರುತಿಸಬೇಕು. ರಿಪ್ ಫಾದರ್ ಸ್ಟಾನ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT