ನಂಬಿ ನಾರಾಯಣ್ 
ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಬಂಧಿಸುವಂತೆ ಐಬಿಯಿಂದ ಒತ್ತಡವಿತ್ತು: ಮಾಜಿ ಡಿಜಿಪಿ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ.

ತಿರುವನಂತಪುರ: ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರು ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಈ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ. 

ಇನ್ನು ಸಿಬಿಐ ಮ್ಯಾಥ್ಯೂಸ್ ಹಾಗೂ ಇತರ 17 ಜನರ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಸಾಕ್ಷ್ಯಗಳ ತಿರುಚುವಿಕೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. 

ಇಸ್ರೋ ಬೇಹುಗಾರಿಕೆ ಪ್ರಕರಣ ಕುರಿತಂತೆ ಕೇಂದ್ರೀಯ ಸಂಸ್ಥೆಗಳಿಂದ ಸಮಗ್ರವಾದ ತನಿಖೆ ಅಗತ್ಯವಿತ್ತು. ಹೀಗಾಗಿ ನಾನೇ ಈ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಶಿಫಾರಸು ಮಾಡಿದ್ದೆ ಎಂದು ಮ್ಯಾಥ್ಯೂಸ್ ಅರ್ಜಿಯಲ್ಲಿ ತಿಳಿಸಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT