ನಂಬಿ ನಾರಾಯಣ್ 
ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಬಂಧಿಸುವಂತೆ ಐಬಿಯಿಂದ ಒತ್ತಡವಿತ್ತು: ಮಾಜಿ ಡಿಜಿಪಿ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ.

ತಿರುವನಂತಪುರ: ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರು ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಈ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ. 

ಇನ್ನು ಸಿಬಿಐ ಮ್ಯಾಥ್ಯೂಸ್ ಹಾಗೂ ಇತರ 17 ಜನರ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಸಾಕ್ಷ್ಯಗಳ ತಿರುಚುವಿಕೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. 

ಇಸ್ರೋ ಬೇಹುಗಾರಿಕೆ ಪ್ರಕರಣ ಕುರಿತಂತೆ ಕೇಂದ್ರೀಯ ಸಂಸ್ಥೆಗಳಿಂದ ಸಮಗ್ರವಾದ ತನಿಖೆ ಅಗತ್ಯವಿತ್ತು. ಹೀಗಾಗಿ ನಾನೇ ಈ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಶಿಫಾರಸು ಮಾಡಿದ್ದೆ ಎಂದು ಮ್ಯಾಥ್ಯೂಸ್ ಅರ್ಜಿಯಲ್ಲಿ ತಿಳಿಸಿದ್ದಾರೆ. 

ಸಿಬಿ ಮ್ಯಾಥ್ಯೂಸ್ ಅವರ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT