ಪತ್ರಕರ್ತ ಸಿದ್ಧಿಖ್ ಕಪ್ಪನ್ 
ದೇಶ

ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಣೆ 

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ.

ನವದೆಹಲಿ: ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ಧಿಖ್ ಕಪ್ಪನ್ ಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ.

ಇಂದು ಮಥುರಾ ಕೋರ್ಟ್ ನಡೆದ ವಿಚಾರಣೆಯಲ್ಲಿ ಜಾಮೀನು ನಿರಾಕರಿಸಲಾಗಿದ್ದು, ಮೂಲಕ ಪತ್ರಕರ್ತನ 8 ತಿಂಗಳ ಸೆರೆವಾಸ ಮತ್ತೆ ಮುಂದುವರೆಯುವಂತಾಗಿದೆ.

ಕಳೆದ ವರ್ಷದ ಅಕ್ಟೋಬರ್ ನಲ್ಲಿ ಉತ್ತರಪ್ರದೇಶದ ಹತ್ರಾಸ್ ನಲ್ಲಿ ದಲಿತ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದ ವರದಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಪತ್ರಕರ್ತ ಸಿದ್ಧಿಖ್ ಕಪ್ಪನ್ ರನ್ನು ಬಂಧಿಸಲಾಗಿತ್ತು. 

ಇದೇ ಪ್ರಕರಣದಲ್ಲಿ ಕಪ್ಪನ್ ಮಾತ್ರವಲ್ಲದೇ ಇತರೆ ಮೂವರನ್ನು ಕೂಡ ವಿವಾದಿತ ಅಲ್ಪಸಂಖ್ಯಾತ ಸಮುದಾಯದ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಬಂಧ ಹೊಂದಿದ್ದಾರೆಂದು ಮತ್ತು ಶಾಂತಿ ಉಲ್ಲಂಘನೆ ಆರೋಪದ ಮೇರೆಗೆ ಬಂಧಿಸಲಾಗಿತ್ತು.  

ಇತ್ತೀಚೆಗಷ್ಟೇ ನಿಧನರಾಗಿದ್ದ ಕಪ್ಪನ್ ತಾಯಿ
ಕಳೆದ ಜೂನ್ 18ರಂದು ಕಪ್ಪನ್ ಅವರ 90 ವರ್ಷದ ತಾಯಿ ನಿಧನರಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದರು. ಕಪ್ಪನ್ ಜೈಲಿನಲ್ಲಿ ಇದ್ದಿದರಿಂದ ತಾಯಿಯ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲು ಸಾಧ್ಯವಾಗಿರಲಿಲ್ಲ ಎಂದು ವರದಿ ವಿವರಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT