ಸೋನಿಯಾ ಗಾಂಧಿ ಭೇಟಿಗೆ ತೆರಳುತ್ತಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ 
ದೇಶ

ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹಿನ್ನೆಲೆ ಅಮರಿಂದರ್ ಸಿಂಗ್- ಸೋನಿಯಾ ಗಾಂಧಿ ಭೇಟಿ

ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ನವದೆಹಲಿ: ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ರಾಜ್ಯ ಘಟಕದಲ್ಲಿ ಹೆಚ್ಚಾಗುತ್ತಿರುವ ಬಣ ರಾಜಕೀಯವನ್ನು ತಹಬದಿಗೆ ತರಲು ಹೈಕಮಾಂಡ್ ನಾಯಕರು ಯತ್ನಿಸುತ್ತಿದ್ದಾರೆ. 

ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸಿಎಂ ಅಮರಿಂದರ್ ಸಿಂಗ್ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

ಪಂಜಾಬ್ ಕಾಂಗ್ರೆಸ್ ನಲ್ಲಿ ಬಣ ರಾಜಕೀಯವನ್ನು ಕೊನೆಗಾಣಿಸಲು ಎಲ್ಲಾ ವರ್ಗ, ಜಾತಿಗಳಿಗೂ ಪಕ್ಷ, ಸಂಪುಟದಲ್ಲಿ ಸ್ಥಾನ ನೀಡುವ ಸೂತ್ರವನ್ನು ಅಮರಿಂದರ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಚರ್ಚಿಸಿದ್ದಾರೆ. ಪಂಜಾಬ್ ಚುನಾವಣೆಗೆ ಇನ್ನು ಕೆಲವೇ ತಿಂಗಳ ಸಮಯವಿದೆ. 

ಕಳೆದ ತಿಂಗಳು ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದ ಸಿಂಗ್, ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಸಿಧು ಭೇಟಿ ಮಾಡಿದ್ದ ಬೆನ್ನಲ್ಲೇ ಸಿಂಗ್ ಸೋನಿಯಾ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT