ಪ್ರಧಾನಿ ನರೇಂದ್ರ ಮೋದಿ 
ದೇಶ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ​ರಚನೆ ಸಾಧ್ಯತೆ

ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ ಕುತೂಹಲ ಮತ್ತಷ್ಟು ತೀವ್ರಗೊಂಡಿದೆ.

ನವದೆಹಲಿ: ಜುಲೈ 8ಕ್ಕೆ ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ ಕುತೂಹಲ ಮತ್ತಷ್ಟು ತೀವ್ರಗೊಂಡಿದೆ. ಜೆ ಪಿ ನಡ್ಡಾ ಸುಮಾರು ಒಂದು ತಿಂಗಳಿನಿಂದ ಆಗಾಗ್ಗೆ ಪ್ರಧಾನಿ ನಿವಾಸಕ್ಕೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಹಾರದಿಂದ ನಾಲ್ವರು ಮಂತ್ರಿಗಳನ್ನು ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಈ ಪೈಕಿ ಎರಡು ಜೆಡಿಯು, ಒಂದು ಎಲ್ ಜೆಪಿ (ಪಶುಪತಿ ಪರಾಸ್ ಗ್ರೂಪ್ )  ಮತ್ತೊಂದು ಬಿಜೆಪಿಗೆ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬಿಜೆಪಿ ತನ್ನ ಪ್ರಮುಖ ನಾಯಕರು ಮತ್ತು ಎನ್ ಡಿಎ ಮೈತ್ರಿ ಸದಸ್ಯರುಗಳಿಗೆ ನರೇಂದ್ರ ಮೋದಿ ಸಂಪುಟದಲ್ಲಿ ಶೀಘ್ರದಲ್ಲಿಯೇ ಸೇರಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಆರಂಭಿಕ ಮೂಲಗಳು ಹೇಳುತ್ತಿದ್ದವು. ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ಜ್ಯೋತಿರಾಧಿತ್ಯ ಸಿಂಧಿಯಾ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ತ್ರಿವೇಂದರ್ ಸಿಂಗ್ ರಾವತ್  ಅವರಂತಹ ಅನೇಕ ಮುಖಂಡರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆಯಿರುವುದಾಗಿ ಊಹಾಪೋಹಗಳು ಹರಡಿವೆ.

ಶಿವಸೇನಾ ಮತ್ತು ಶಿರೋಮಣಿ ಅಕಾಲಿ ದಳ ಎನ್ ಡಿಎಯಿಂದ ನಿರ್ಗಮನ ಮತ್ತು ರಾಮ್ ವಿಲಾಸ್ ಪಾಸ್ವನ್ ಅವರ ನಿಧನದಿಂದ ಅನೇಕ ಸ್ಥಾನಗಳು ಸಂಪುಟದಲ್ಲಿ ಖಾಲಿಯಾಗಿವೆ. ಮುಂದೆ ಪಕ್ಷ ವಿಸ್ತರಣೆ ದೃಷ್ಟಿಯಿಂದ ಮಧ್ಯಪ್ರದೇಶ ಮತ್ತು ಆಂಧ್ರ ಪ್ರದೇಶದಂತಹ ಅನೇಕ  ಪ್ರಮುಖ ರಾಜ್ಯಗಳ ಮುಖಂಡರಿಗೆ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಈ ಹಿಂದೆ ಹೇಳಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT