ವಿಡಿಯೋ ಚಿತ್ರ 
ದೇಶ

ನಿಮ್ಮ ಮಾಸ್ಕ್ ಎಲ್ಲಿ?: 3ನೇ ಅಲೆ ಆತಂಕದ ನಡುವೆ ಸಣ್ಣ ಹುಡುಗನ ಮಾತಿಗೆ ಬೆಲೆ ಕೊಡದೆ ಅಸಡ್ಡೆ ತೋರಿದ ಜನ, ವಿಡಿಯೋ!

ದೇಶಾದ್ಯಂತ ರಾಜ್ಯಗಳು ಕೊರೋನಾ ಲಾಕ್‌ಡೌನ್ ನಿರ್ಬಂಧಗಳನ್ನು ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿವೆ. ಇನ್ನು ತಿಂಗಳುಗಳಿಂದ ಮನೆಯಲ್ಲೇ ಇದ್ದ ಜನರು ಎರಡನೇ ಅಲೆಯಿಂದ ಕಲಿತ ಕಠಿಣ ಪಾಠಗಳನ್ನು ಮರೆತು ಸ್ವಾತಂತ್ರ್ಯವನ್ನು ಆನಂದಿಸಲು ಮುಂದಾಗುತ್ತಿದ್ದಾರೆ.

ದೇಶಾದ್ಯಂತ ರಾಜ್ಯಗಳು ಕೊರೋನಾ ಲಾಕ್‌ಡೌನ್ ನಿರ್ಬಂಧಗಳನ್ನು ಹಂತ ಹಂತವಾಗಿ ಅನ್ ಲಾಕ್ ಮಾಡುತ್ತಿವೆ. ಇನ್ನು ತಿಂಗಳುಗಳಿಂದ ಮನೆಯಲ್ಲೇ ಇದ್ದ ಜನರು ಎರಡನೇ ಅಲೆಯಿಂದ ಕಲಿತ ಕಠಿಣ ಪಾಠಗಳನ್ನು ಮರೆತು ಸ್ವಾತಂತ್ರ್ಯವನ್ನು ಆನಂದಿಸಲು ಮುಂದಾಗುತ್ತಿದ್ದಾರೆ.

ಮನಾಲಿಯಲ್ಲಿ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮಾಜಿಕ ಅಂತರ ಮರೆತು ಸಾವಿರಾರೂ ಸಂಖ್ಯೆಯಲ್ಲಿ ಸೇರಿದ್ದಾರೆ. ಅಲ್ಲದೆ ಮಾಸ್ಕ್ ಗಳನ್ನು ಧರಿಸದೆ ಇರುವುದು ಜನರು ಎಷ್ಟು ಅಸಡ್ಡೆ ತೋರಿದ್ದಾರೆ ಎಂಬುದನ್ನು ತೋರಿಸಿದೆ. ಈ ಚಿತ್ರಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿವೆ.

ಮುಚ್ಚಲ್ಪಟ್ಟಿದ್ದ ಅಂಗಡಿಗಳು, ಮಾಲ್‌ಗಳು ಮತ್ತು ಇತರ ಚಟುವಟಿಕೆಗಳು ತೆರೆದುಕೊಳ್ಳುವುದರೊಂದಿಗೆ ಜನರು ಹೆಜ್ಜೆ ಹಾಕಲು ಪ್ರಾರಂಭಿಸಿರುವುದು ಅಚ್ಚರಿಯೇನಲ್ಲ. ಆದರೆ ಸಾಮಾಜಿಕ ಅಂತರ ಮರೆತಿರುವುದು ಮೂರನೇ ಅಲೆಯ ಆತಂಕಕ್ಕೆ ಕಾರಣವಾಗಿದೆ. 

ಇನ್ನು ವಿಡಿಯೋವೊಂದರಲ್ಲಿ ಬಾಲಕನೋರ್ವ ಮಾಸ್ಕ್ ಧರಿಸದೆ ಸುತ್ತುತ್ತಿದ್ದವರನ್ನು ಪ್ರಶ್ನಿಸಿದ್ದಾನೆ. ಆದರೆ ಜನರು ಬಾಲಕನ ಮಾತಿಗೆ ಹೆಚ್ಚಿನ ಮನ್ನಣೆ ನೀಡದೆ ಮುಂದೆ ಸಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಿಡಿಕಾರಿದ್ದಾರೆ. 

ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ಏನಾಯಿತು ಎಂಬುದನ್ನು ನಾವು ಕಲಿತಂತೆ ಕಾಣುತ್ತಿಲ್ಲ. ಹೆಚ್ಚು ಹೆಚ್ಚು ಜನರು ಒಂದೆಡೆ ಸೇರುತ್ತಿದ್ದಾರೆ. ಪ್ರಕರಣಗಳು ರಾಷ್ಟ್ರೀಯ ಮಟ್ಟದಲ್ಲಿ ಏರಿಕೆಯಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಮೂರನೇ ಅಲೆ ಅನಿವಾರ್ಯ. ಇದು ಮುಂದಿನ ಆರರಿಂದ ಎಂಟು ವಾರಗಳಲ್ಲಿ ದೇಶವನ್ನು ಹೊಡೆಯಬಹುದು. ಇದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಎಚ್ಚರಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT