ಟ್ವಿಟರ್ 
ದೇಶ

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡಿಲ್ಲ, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಮುಕ್ತ ಅವಕಾಶವಿದೆ: ದೆಹಲಿ ಹೈಕೋರ್ಟ್

ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡುತ್ತಿಲ್ಲ, ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಕ್ತ ಅವಕಾಶವಿದೆ ಎಂದು ಹೇಳಿದೆ. ಅಲ್ಲದೇ, ದೇಶದಲ್ಲಿ ಟ್ವಿಟರ್ ಕಾರ್ಯನಿರ್ವಹಿಸಲು ಬಯಸಿದರೆ, ಇಲ್ಲಿನ ನಿಯಮಗಳನ್ನು ಅನುಸರಿಸುವಂತೆ ಈಗಾಗಲೇ ಸ್ಪಷ್ಟಪಡಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಎಲ್ಲಾ ಪ್ರಮುಖ ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದ್ದರೂ ಕಳೆದ 42 ದಿನಗಳಿಂದಲೂ ಟ್ವಿಟರ್ ಸಂಸ್ಥೆ ಸಂಪೂರ್ಣವಾಗಿ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂದು ಹೆಚ್ಚುವರಿ ಸಾಲಿಸಿಟಿರ್ ಜನರಲ್ ವರದಿ ಸಲ್ಲಿಕೆ ಬಳಿಕ ನ್ಯಾಯಾಲಯ ಈ ರೀತಿಯಲ್ಲಿ ಹೇಳಿದೆ.

ನೂತನ ಐಟಿ ನಿಯಮಗಳ ಅನುಸರಣೆ ಸಂಬಂಧ ಟ್ವಿಟರ್ ಸಂಸ್ಥೆ ಸ್ಪಷ್ಟ ನಿಲುವು ವ್ಯಕ್ತಪಡಿಸುವಂತೆ ಟ್ವಿಟರ್ ಪರ ವಕೀಲ ಎಸ್ ಆರ್ ಸಜನ್ ಪೂವಯ್ಯ ಅವರಿಗೆ ಹೇಳಿದ ನ್ಯಾಯಾಧೀಶೆ ರೇಖಾ ಪಲ್ಲಿ ಅವರನ್ನೊಳಗೊಂಡ ನ್ಯಾಯಪೀಠ, ಈ ವಿಚಾರವನ್ನು ಜುಲೈ 8ಕ್ಕೆ ಮುಂದೂಡಿತು.

ಕುಂದುಕೊರತೆ ಅಧಿಕಾರ ನೇಮಕ ಮಾತ್ರವಲ್ಲದೇ, ನೂತನ ನಿಯಮಗಳಡಿ ಅನುಸರಿಸದೆ ಇರುವ ಎಲ್ಲಾ ಅಂಶಗಳ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕೆಂದು ನ್ಯಾಯಾಲಯ ಟ್ವಿಟರ್ ಇಂಕ್ ವಕೀಲರಿಗೆ ಸೂಚಿಸಿತು. ಕುಂದುಕೊರತೆ ಅಧಿಕಾರಿ ನೇಮಕ ಮಾಡಲು ವಿಳಂಬ ಮಾಡುತ್ತಿರುವ ಟ್ವಿಟರ್ ಸಂಸ್ಥೆ ಧೋರಣೆ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ಈ ಪ್ರಕ್ರಿಯೆಗಾಗಿ ಇನ್ನು ಎಷ್ಟು ದಿನಗಳು ಬೇಕಾಗುತ್ತದೆ ಎಂದು ಕೇಳಿದ ನ್ಯಾಯಾಧೀಶೆ ರೇಖಾ ಪಲ್ಲಿ, ಟ್ವಿಟರ್ ನಮ್ಮ ದೇಶದಲ್ಲಿ ಬಯಸಿದಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ಭಾವಿಸಿದರೆ, ನಾನು ಅದಕ್ಕೆ ಅನುಮತಿಸುವುದಿಲ್ಲ ಎಂದರು. 

ಈ ಮಧ್ಯೆ, ಸ್ಯಾನ್ ಫ್ರಾನ್ಸಿಸ್ಕೋನಲ್ಲಿನ ಟ್ವಿಟರ್ ನಿಂದ ಸ್ಪಷ್ಪ ಸೂಚನೆ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ಸಮಯ ವಲಯದಲ್ಲಿನ ವ್ಯತ್ಯಾಸಗಳಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟ್ವಿಟರ್ ಪರ ಹಾಜರಾದ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ