ಟ್ವಿಟರ್ 
ದೇಶ

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡಿಲ್ಲ, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಮುಕ್ತ ಅವಕಾಶವಿದೆ: ದೆಹಲಿ ಹೈಕೋರ್ಟ್

ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಐಟಿ ನಿಯಮಗಳು 2021ನ್ನು ಅನುಸರಿಸದ ಆರೋಪಕ್ಕೊಳಪಟ್ಟ ಟ್ವಿಟರ್ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಟ್ವಿಟರ್ ಗೆ ಯಾವುದೇ ರಕ್ಷಣೆ ನೀಡುತ್ತಿಲ್ಲ, ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಕ್ತ ಅವಕಾಶವಿದೆ ಎಂದು ಹೇಳಿದೆ. ಅಲ್ಲದೇ, ದೇಶದಲ್ಲಿ ಟ್ವಿಟರ್ ಕಾರ್ಯನಿರ್ವಹಿಸಲು ಬಯಸಿದರೆ, ಇಲ್ಲಿನ ನಿಯಮಗಳನ್ನು ಅನುಸರಿಸುವಂತೆ ಈಗಾಗಲೇ ಸ್ಪಷ್ಟಪಡಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಎಲ್ಲಾ ಪ್ರಮುಖ ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದ್ದರೂ ಕಳೆದ 42 ದಿನಗಳಿಂದಲೂ ಟ್ವಿಟರ್ ಸಂಸ್ಥೆ ಸಂಪೂರ್ಣವಾಗಿ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂದು ಹೆಚ್ಚುವರಿ ಸಾಲಿಸಿಟಿರ್ ಜನರಲ್ ವರದಿ ಸಲ್ಲಿಕೆ ಬಳಿಕ ನ್ಯಾಯಾಲಯ ಈ ರೀತಿಯಲ್ಲಿ ಹೇಳಿದೆ.

ನೂತನ ಐಟಿ ನಿಯಮಗಳ ಅನುಸರಣೆ ಸಂಬಂಧ ಟ್ವಿಟರ್ ಸಂಸ್ಥೆ ಸ್ಪಷ್ಟ ನಿಲುವು ವ್ಯಕ್ತಪಡಿಸುವಂತೆ ಟ್ವಿಟರ್ ಪರ ವಕೀಲ ಎಸ್ ಆರ್ ಸಜನ್ ಪೂವಯ್ಯ ಅವರಿಗೆ ಹೇಳಿದ ನ್ಯಾಯಾಧೀಶೆ ರೇಖಾ ಪಲ್ಲಿ ಅವರನ್ನೊಳಗೊಂಡ ನ್ಯಾಯಪೀಠ, ಈ ವಿಚಾರವನ್ನು ಜುಲೈ 8ಕ್ಕೆ ಮುಂದೂಡಿತು.

ಕುಂದುಕೊರತೆ ಅಧಿಕಾರ ನೇಮಕ ಮಾತ್ರವಲ್ಲದೇ, ನೂತನ ನಿಯಮಗಳಡಿ ಅನುಸರಿಸದೆ ಇರುವ ಎಲ್ಲಾ ಅಂಶಗಳ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕೆಂದು ನ್ಯಾಯಾಲಯ ಟ್ವಿಟರ್ ಇಂಕ್ ವಕೀಲರಿಗೆ ಸೂಚಿಸಿತು. ಕುಂದುಕೊರತೆ ಅಧಿಕಾರಿ ನೇಮಕ ಮಾಡಲು ವಿಳಂಬ ಮಾಡುತ್ತಿರುವ ಟ್ವಿಟರ್ ಸಂಸ್ಥೆ ಧೋರಣೆ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ಈ ಪ್ರಕ್ರಿಯೆಗಾಗಿ ಇನ್ನು ಎಷ್ಟು ದಿನಗಳು ಬೇಕಾಗುತ್ತದೆ ಎಂದು ಕೇಳಿದ ನ್ಯಾಯಾಧೀಶೆ ರೇಖಾ ಪಲ್ಲಿ, ಟ್ವಿಟರ್ ನಮ್ಮ ದೇಶದಲ್ಲಿ ಬಯಸಿದಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ಭಾವಿಸಿದರೆ, ನಾನು ಅದಕ್ಕೆ ಅನುಮತಿಸುವುದಿಲ್ಲ ಎಂದರು. 

ಈ ಮಧ್ಯೆ, ಸ್ಯಾನ್ ಫ್ರಾನ್ಸಿಸ್ಕೋನಲ್ಲಿನ ಟ್ವಿಟರ್ ನಿಂದ ಸ್ಪಷ್ಪ ಸೂಚನೆ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ಸಮಯ ವಲಯದಲ್ಲಿನ ವ್ಯತ್ಯಾಸಗಳಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟ್ವಿಟರ್ ಪರ ಹಾಜರಾದ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT