ಎನ್ ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ 
ದೇಶ

ವೆಬ್ ಸೈಟ್ ನಲ್ಲಿ 'ಮುಸ್ಲಿಂ ಮಹಿಳೆಯರ ಹರಾಜು' ದೆಹಲಿ ಪೊಲೀಸ್ ಮುಖ್ಯಸ್ಥರಿಗೆ ಎನ್ ಸಿಡಬ್ಲ್ಯೂಪತ್ರ!

ಕಾರ್ಯನಿರ್ವಹಿಸದ ವೆಬ್ ಸೈಟ್ ವೊಂದು ಅಕ್ರಮವಾಗಿ ಅನೇಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅವರನ್ನು ಹರಾಜಿಗೆ ಹಾಕಿರುವ ಕುರಿತು ತನಿಖೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಎನ್ ಸಿಡಬ್ಲ್ಯೂ ಹೇಳಿದೆ.

ನವದೆಹಲಿ: ಕಾರ್ಯನಿರ್ವಹಿಸದ ವೆಬ್ ಸೈಟ್ ವೊಂದು ಅಕ್ರಮವಾಗಿ ಅನೇಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅವರನ್ನು ಹರಾಜಿಗೆ ಹಾಕಿರುವ ಕುರಿತು ತನಿಖೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಎನ್ ಸಿಡಬ್ಲ್ಯೂ ಹೇಳಿದೆ.

10 ದಿನಗಳೊಳಗೆ ವಿವರವಾದ ಕ್ರಮ ತೆಗೆದುಕೊಂಡ ವರದಿಯನ್ನು ಸಲ್ಲಿಸುವಂತೆ ಆಯೋಗ ಕೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. ಅವಹೇಳನಾಕಾರಿ ಹೇಳಿಕೆಯೊಂದಿಗೆ ಅನೇಕ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಹಾಕಿದ್ದ ವೆಬ್ ಸೈಟ್ ತನಿಖೆಗಾಗಿ ಮಧ್ಯ ಪ್ರವೇಶಿಸುವಂತೆ ದೆಹಲಿ ಪೊಲೀಸ್ ಆಯುಕ್ತ ಬಾಲಾಜಿ ಶ್ರೀವಾಸ್ತವರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ  ರೇಖಾ ಶರ್ಮಾ ಮನವಿ ಮಾಡಿದ್ದಾರೆ. 

'ಗಿತುಬ್' ಎಂಬ ಇಂಟರ್ನೆಟ್ ಪ್ಲಾಟ್ ಫಾರಂನಲ್ಲಿ 'ಸುಲ್ಲಿ ಡೀಲ್ಸ್' ಎಂದು ಕರೆಯಲಾಗುವ ವೆಬ್ ಸೈಟ್ ನಲ್ಲಿ  ಪತ್ರಕರ್ತರು, ಹೋರಾಟಗಾರರು, ವಿಶ್ಲೇಷಕರು, ಕಲಾವಿದರು, ಸಂಶೋಧಕರು  ಸೇರಿದಂತೆ ಅನೇಕ ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಅವಹೇಳನಾಕಾರಿ ಹೇಳಿಕೆಯೊಂದಿಗೆ ಅಪ್ ಮಾಡಿ, ಅವರನ್ನು ಹರಾಜಿಗೆ ಹಾಕಿರುವ ಬಗ್ಗೆ ಮಾಧ್ಯಮ ವರದಿಯೊಂದರಲ್ಲಿ ಉಲ್ಲೇಖಿಸಿರುವುದರ ಬಗ್ಗೆ  ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವುದಾಗಿ ಎನ್ ಸಿಡಬ್ಲ್ಯೂ ಹೇಳಿಕೆಯಲ್ಲಿ ತಿಳಿಸಿದೆ. 

ಈ ಅಪರಾಧದ ಸಂಚುಕೋರರು ಶಿಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲು ಮತ್ತು ಈ ವಿಚಾರದ ಬಗ್ಗೆ ತನಿಖೆ ನಡೆಸಲು ಮಧ್ಯ ಪ್ರವೇಶಿಸಬೇಕೆಂದು ದೆಹಲಿ ಪೊಲೀಸ್ ಆಯುಕ್ತರಿಗೆ ರೇಖಾ ಶರ್ಮಾ ಪತ್ರ ಬರೆದಿದ್ದಾರೆ. 10 ದಿನಗಳೊಳಗೆ ಕ್ರಮ ತೆಗೆದುಕೊಂಡ ಬಗ್ಗೆ ವಿವರವಾದ ವರದಿಯೊಂದನ್ನು ಸಲ್ಲಿಸುವಂತೆ ಆಯೋಗ ಕೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT