ಸಂಗ್ರಹ ಚಿತ್ರ 
ದೇಶ

ಕಳೆದ ವಾರ ದೇಶದ ಶೇ.53ರಷ್ಟು ಕೊರೋನಾ ಪ್ರಕರಣ ಮಹಾರಾಷ್ಟ್ರ, ಕೇರಳದಲ್ಲಿ ಪತ್ತೆ: ಕೇಂದ್ರ ಸರ್ಕಾರ

ಕಳೆದ ವಾರ ಭಾರತದಲ್ಲಿ ದಾಖಲಾದ ಒಟ್ಟೂ ಕೊರೋನಾ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳನ್ನು ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ದಾಖಲಿಸಿದೆ, ಸಾಂಕ್ರಾಮಿಕ ದೂರವಾಗಿದೆ ಎಂಬ ಆತ್ಮವಿಶ್ವಾಸಕ್ಕೆ ಈಗಲೂ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ಕಳೆದ ವಾರ ಭಾರತದಲ್ಲಿ ದಾಖಲಾದ ಒಟ್ಟೂ ಕೊರೋನಾ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳನ್ನು ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ದಾಖಲಿಸಿದೆ, ಸಾಂಕ್ರಾಮಿಕ ದೂರವಾಗಿದೆ ಎಂಬ ಆತ್ಮವಿಶ್ವಾಸಕ್ಕೆ ಈಗಲೂ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು, ಮಾತನಾಡಿ , "ದೇಶವು ಇನ್ನೂ ಎರಡನೇ ಅಲೆಯನ್ನು ಎದುರಿಸುತ್ತಿದೆ ಮತ್ತು ಕೊರೋನಾ ತೊಲಗಿದೆಎಂಬ ತಪ್ಪು ನಂಬಿಕೆಯನ್ನು ನಾವು ಹೊಂದುವುದು ಬೇಡ, ಬದಲಿಗೆ ಆತ್ಮಾವಲೋಕನ ಮಾಡಬೇಕಾಗಿದೆ" ಎಂದು ಹೇಳಿದರು.

ಪ್ರವಾಸಿ ತಾಣಗಳ ದೃಶ್ಯಗಳು ಮತ್ತು ಜನರು ಕೊರೋನಾ ಪ್ರೋಟೋಕಾಲ್‌ಗಳನ್ನು ಅನುಸರಿಸದೆ ಬೆರೆಯುವ ರೀತಿ "ಕಳವಳಕ್ಕೆ ಕಾರಣವಾಗಿದೆ" ಮತ್ತು ಅಂತಹ ನಿರ್ಲಕ್ಷ್ಯವು ವೈರಸ್ ಹರಡುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿದೆ.

ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ರಷ್ಯಾ ಮತ್ತು ಯುಕೆ ಸೇರಿದಂತೆ ಕೆಲವು ದೇಶಗಳಲ್ಲಿ ಇತ್ತೀಚಿಗೆ ಕೊರೋನಾ ಪ್ರಕರಣ ಹೆಚ್ಚಳವಾಗಿದೆ. ಮಾಸ್ಕ್ ರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದ ಕೊರೋನನಾ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಅವರು ಮುಂದಾದರು.

ಕಳೆದ ವಾರ ಭಾರತದಲ್ಲಿ ವರದಿಯಾದ ಕೊರೋನಾ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ (ಶೇ 21) ಮತ್ತು ಕೇರಳ (ಶೇ 32)ದಿಂದ ಬಂದವು ಎಂದು ಅವರು ಹೇಳಿದರು ಮತ್ತು ಭಾರತದಲ್ಲಿ ಹೊಸ ಕೊರೋನಾ  ಪ್ರಕರಣಗಳಲ್ಲಿ 80 ಪ್ರತಿಶತ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 90 ಜಿಲ್ಲೆಗಳಿಂದ ವರದಿಯಾಗಿದೆ, ಈ ಪ್ರದೇಶಗಳಲ್ಲಿ ಹೆಚ್ಚು ನಿಗಾ ಹರಿಸಬೇಕಾದ ಅಗತ್ಯವನ್ನು ಸೂಚಿಸುತ್ತದೆ. ಜುಲೈ 8 ಕ್ಕೆ ಕೊನೆಗೊಂಡ ವಾರದಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 66 ಜಿಲ್ಲೆಗಳು ಕೊರೋನಾ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವರದಿ ಮಾಡಿದೆ.ಭಾರತದಲ್ಲಿ ಒದುವರೆಗೆ ಕೊರೋನಾದ ಲ್ಯಾಂಬ್ಡಾ ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ.

ಎನ್‌ಐಟಿಐ ಆಯೋಗ ಸದಸ್ಯ (ಆರೋಗ್ಯ) ವಿಕೆ ಪಾಲ್ ಮಾತನಾಡಿ, ಗರ್ಭಿಣಿ ಮಹಿಳೆಯರಲ್ಲಿ ಕೊರೋನಾ 9 ಪೂರ್ವ-ಅವಧಿಯ ಹೆರಿಗೆಯಂತಹ ಕೆಲವು ಅಪಾಯಗಳನ್ನು ಹೆಚ್ಚಿಸುತ್ತದೆ, ಅದಕ್ಕಾಗಿಯೇ ಅವರು ಲಸಿಕೆ ತೆಗೆದುಕೊಳ್ಳುವುದು ಮುಖ್ಯವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT