ಸಂಗ್ರಹ ಚಿತ್ರ 
ದೇಶ

ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸದೆ ಜನರ ಸೇರುವಿಕೆ 'ಕಳವಳಕ್ಕೆ ಗಂಭೀರ ಕಾರಣವಾಗಿದೆ': ಸರ್ಕಾರ

ಕೋವಿಡ್ ಮಾರ್ಗಸೂಚಿ ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ದೃಶ್ಯಗಳು "ಕಳವಳಕ್ಕೆ ಕಾರಣ' ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನವದೆಹಲಿ: ಕೋವಿಡ್ ಮಾರ್ಗಸೂಚಿ ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ದೃಶ್ಯಗಳು 'ಕಳವಳಕ್ಕೆ ಗಂಭೀರ ಕಾರಣ' ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾರುಕಟ್ಟೆಗಳು ಮತ್ತು ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಇದು ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ. ಸಾಮಾಜಿಕ ದೂರ ಮತ್ತು ಮಾಸ್ಕ್ ಧರಿಸುವ ಮಾರ್ಗಸೂಚಿಗಳನ್ನು ಜನರು ಪಾಲಿಸುತ್ತಿಲ್ಲ. ಇದು ಕಳವಳಕ್ಕೆ ಗಂಭೀರ ಕಾರಣವಾಗಿದೆ ಎಂದು ಆರೋಗ್ಯ, ಎನ್‌ಐಟಿಐ ಆಯೋಗದ ಸದಸ್ಯ ಡಾ ವಿ.ಕೆ.ಪಾಲ್ ಹೇಳಿದರು.

ಪ್ರವಾಸಿ ಸ್ಥಳಗಳಲ್ಲಿ ಜನರು ಗುಂಪು ಗುಂಪಾಗಿ ಸೇರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಯಿತು. ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವುದು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿದೆ ಎಂದು ಡಾ. ಪೌಲ್ ತಿಳಿಸಿದರು. 

ಗರ್ಭಿಣಿಯರು ಲಸಿಕೆ ಪಡೆಯುವುದು ಅತೀ ಮುಖ್ಯ. 'ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡುವ ಮಾರ್ಗಸೂಚಿಗಳನ್ನು ಸಚಿವಾಲಯ ಹೊರಡಿಸಿದೆ. ಮೂರು ಲಸಿಕೆಗಳನ್ನು ಬಳಸಲು ಅರ್ಹತೆ ಇದೆ. ಗರ್ಭಾವಸ್ಥೆಯಲ್ಲಿ ಮಹಿಳೆಗೆ ಕೋವಿಡ್ ಸೋಂಕು ತಗುಲಿದರೆ ಅದರ ಗಂಭೀರತೆ ಹೆಚ್ಚಾಗುತ್ತದೆ ಪೂರ್ವ-ಪ್ರಬುದ್ಧ ಹೆರಿಗೆಯ ತೊಂದರೆಗಳು ಮತ್ತು ಸಾಧ್ಯತೆಗಳು ಸಹ ಹೆಚ್ಚಿವೆ. ಇದು ಮಹಿಳೆಯ ಆರೋಗ್ಯ ಹಾಗೂ ಮಗುವಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ಮುಟ್ಟಿನ ಸಮಯದಲ್ಲಿ ಲಸಿಕೆಗಳನ್ನು ನೀಡಬಹುದು ಮತ್ತು ಬಂಜೆತನದ ಅಪಾಯವಿಲ್ಲ ಎಂದು ಡಾ ಪಾಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!