ದೇಶ

ಮಧ್ಯಪ್ರದೇಶದ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಆರು ಮಂದಿ ಸಾವು

ಮಧ್ಯ ಪ್ರದೇಶದ ಚಾತರ್‍ ಪುರ ಜಿಲ್ಲೆಯ ಬಿಜಾವರ್ ಪ್ರದೇಶದ ಮಹುವಾಜಾಲ ಗ್ರಾಮದಲ್ಲಿ ವಿದ್ಯುತ್‍ ಸ್ಪರ್ಶಿಸಿ ಆರು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಚಾತರ್‍ ಪುರ: ಮಧ್ಯ ಪ್ರದೇಶದ ಚಾತರ್‍ ಪುರ ಜಿಲ್ಲೆಯ ಬಿಜಾವರ್ ಪ್ರದೇಶದ ಮಹುವಾಜಾಲ ಗ್ರಾಮದಲ್ಲಿ ವಿದ್ಯುತ್‍ ಸ್ಪರ್ಶಿಸಿ ಆರು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ನೀರಿನ ಕೊಳವೊಂದರಿಂದ ಬಳಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯು ವ್ಯಕ್ತಿಯೊಬ್ಬರಿಗೆ ತಗುಲಿದ್ದು, ಆತನನ್ನು ಕಾಪಾಡಲು ಹೋದ ಸಂಬಂಧಿಕರಿಗೂ ವಿದ್ಯುತ್ ಸ್ಪರ್ಶವಾಗಿದೆ. ಈ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಪಘಾತದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಂತರ ಗ್ರಾಮಸ್ತರಲ್ಲಿ ಆತಂಕ ಮನೆ ಮಾಡಿದೆ. ವಾಸ್ತವವಾಗಿ, ಟ್ಯಾಂಕ್ ತೆರೆಯಲು, ಮನೆಯ ಸದಸ್ಯರೊಬ್ಬರು ಟ್ಯಾಂಕ್‌ಗೆ ಇಳಿದಾಗ ವಿದ್ಯುತ್ ತಗುಲಿದೆ.ಮನೆಯ ಮತ್ತೊಬ್ಬ ಸದಸ್ಯ ಅವನನ್ನು ಉಳಿಸಲು ಇಳಿದಾಗಲೂ  ಅದೇ ರೀತಿಯಾಗಿ ಒಬ್ಬರಿಗೊಬ್ಬರಿಗೆ ಎಂದು ಆರು ಮಂದಿ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದ್ದಾರೆ. ಮೃತರನ್ನು ಲಕ್ಷ್ಮಣ್ ಅಹಿರ್ವಾರ್, ಶಂಕರ್ ಅಹಿರ್ವಾರ್, ಮಿಲನ್ ಅಹಿರ್ವಾರ್, ನರೇಂದ್ರ, ರಾಂಪ್ರಸಾದ್ ಮತ್ತು ವಿಜಯ್ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಉಸ್ತುವಾರಿ ಮುಖೇಶ್ ಠಾಕೂರ್ ಪೊಲೀಸ್ ಪಡೆಯೊಂದಿಗೆ ಆಗಮಿಸಿದ್ದಾರೆ. ಅದೇ ಸಮಯ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ದುರ್ಘಟನೆಗೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?