ಶರದ್ ಪವಾರ್ 
ದೇಶ

ಜನಸಂಖ್ಯಾ ನಿಯಂತ್ರಣ ಕ್ರಮಕ್ಕೆ ಶರದ್ ಪವಾರ್ ಬೆಂಬಲ

ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ ಬೆಂಬಲಿಸಿದ್ದಾರೆ.

ಮುಂಬೈ: ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ ಬೆಂಬಲಿಸಿದ್ದಾರೆ.

ದೇಶದ ಆರ್ಥಿಕತೆ, ಆರೋಗ್ಯಕರ ಜೀವನ ಮಟ್ಟ ಮತ್ತು ಸಮತೋಲಿತ ವಾತಾವರಣವನ್ನು ಉಳಿಸಿಕೊಳ್ಳಲು ಜನಸಂಖ್ಯೆಯನ್ನು ನಿಯಂತ್ರಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಜನಸಂಖ್ಯಾ ನಿಯಂತ್ರಣದ ಪರವಾಗಿ ಅವರು ನೀಡಿದ ಹೇಳಿಕೆಯು ಇತರ ಪಕ್ಷಗಳಲ್ಲೂ ಈ ವಿಷಯ ಪ್ರತಿಧ್ವನಿಸುತ್ತಿದೆ ಎಂಬುದನ್ನು ತೋರಿಸುತ್ತದೆ.

ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಮಾತನಾಡಿದ ಶರದ್ ಪವಾರ್, ರಾಷ್ಟ್ರದ ಆರ್ಥಿಕತೆ, ಒಟ್ಟು ರಾಷ್ಟ್ರೀಯ ಆದಾಯ, ಆರೋಗ್ಯಕರ ಜೀವನ ಮಟ್ಟ ಮತ್ತು ಸಮತೋಲಿತ ವಾತಾವರಣವನ್ನು ಉಳಿಸಿಕೊಳ್ಳಲು ಜನಸಂಖ್ಯಾ ನಿಯಂತ್ರಣದ ಸಂದೇಶ ಎಲ್ಲರಿಗೂ ತಲುಪಬೇಕಾಗಿದೆ. ಪ್ರಜ್ಞಾಪೂರ್ವಕ ಪ್ರತಿಯೊಬ್ಬ ನಾಗರಿಕನು ವಿಶ್ವ ಜನಸಂಖ್ಯಾ ದಿನದಂದು ಜನಸಂಖ್ಯಾ ನಿಯಂತ್ರಣಕ್ಕೆ ಕೊಡುಗೆ ನೀಡುವ ಬದ್ಧತೆಯನ್ನು ಮಾಡಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT