ಎಂಕೆ ಸ್ಟಾಲಿನ್ 
ದೇಶ

ಮೇಕೆದಾಟುನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಬೇಡ: ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ!

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ರಾಜ್ಯದ ಜನರ ಒಕ್ಕೂಟದ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ಸರ್ವಪಕ್ಷಗಳ ನಿಯೋಗ ಶೀಘ್ರದಲ್ಲೇ ನವದೆಹಲಿಗೆ ಭೇಟಿ ನೀಡಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಎಲ್ಲಾ ಕಾನೂನು ಮತ್ತು ಇತರ ಕ್ರಮಗಳನ್ನು ಮುಂದುವರಿಸಲು ಸಭೆ ನಿರ್ಧರಿಸಿದೆ.

ಸಭೆಯಲ್ಲಿ ಅಂಗೀಕರಿಸಿದ ಮೂರು ನಿರ್ಣಯಗಳಲ್ಲಿ ಮೇಕೆದಾಟು ಯೋಜನೆಯು ಒಂದಾಗಿದೆ. ಇದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ. ಇದು ಭಾರತದ ಸಂವಿಧಾನಕ್ಕೆ ಸವಾಲಾಗಿದೆ ಎಂದು ಹೇಳಿದರು. ಈ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿನ ರೈತರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಂಬಂಧಪಟ್ಟ ಯೋಜನೆಗೆ ಕೇಂದ್ರ ಸಚಿವಾಲಯವು ಅನುಮೋದನೆ ನೀಡಬಾರದು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮತ್ತೊಂದು ನಿರ್ಣಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟುವಿನಲ್ಲಿ ಹೊಸ ಅಣೆಕಟ್ಟು ನಿರ್ಮಾಣವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡುತ್ತವೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT