ಪಂಕಜಾ ಮುಂಡೆ 
ದೇಶ

ಸೋದರಿಗೆ ಸಂಪುಟದಲ್ಲಿ ಸಿಗದ ಸ್ಥಾನ; ಪಕ್ಷದಲ್ಲಿ ತಮ್ಮ ಬಗ್ಗೆ ನಿರ್ಲಕ್ಷ್ಯ: ಮೋದಿ- ನಡ್ಡಾ ಭೇಟಿ ಮಾಡಿದ ಪಂಕಜಾ ಮುಂಡೆ!

ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮ ಸಹೋದರಿಗೆ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ಪಂಕಜಾ ಮುಂಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಮುಂಬಯಿ: ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮ ಸಹೋದರಿಗೆ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ಪಂಕಜಾ ಮುಂಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾಗಿದ್ದ ಗೋಪಿನಾಥ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ ಅವರು ತಮ್ಮ ಸಹೋದರಿ ಸಂಸದೆ ಪ್ರೀತಮ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂದು ನಿರೀಕ್ಷಿಸಿದ್ದರು, 

ಬಿಜೆಪಿ ಒಬಿಸಿ ಮತದಾರರನ್ನು ಓಲೈಸುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಕಂಡು ಬರುತ್ತದೆ. "ಮುಂಡೆ ಕುಟುಂಬಕ್ಕೆ ಏನನ್ನೂ ನೀಡಲು ಬಿಜೆಪಿ ಬಯಸುವುದಿಲ್ಲ ಎಂದಿದ್ದಾರೆ.

ಪಕ್ಷದ ನಿರ್ಧಾರಕ್ಕೆ ತಾನು ಬದ್ಧನಾಗಿರುವುದಾಗಿ ಪಂಕಜಾ ಹೇಳಿಕೊಂಡಿದ್ದರೂ, ಅವರ ನಿಷ್ಠೆಯಿಂದಾಗಿ ಹಲವಾರು ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಇತರರು ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಪಕ್ಷದಲ್ಲಿ ಇಬ್ಬರು ಸಹೋದರಿಯರ ಪ್ರಾಮುಖ್ಯತೆ ಮೊಟಕುಗೊಳಿಸುವ ಯೋಜನೆ ಇದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ಚುನಾವಣೆಯಲ್ಲಿ ತಮ್ಮ ಸೋದರ ಸಂಬಂಧಿಗೆ ಬಿಜೆಪಿ ನಾಯಕರು ಸಹಾಯ ಮಾಡಿದ ಕಾರಣ ಪಂಕಜಾ ಸೋತಿದ್ದರು.  ಎಂಎಲ್‌ಸಿ ಹುದ್ದೆ ನೀಡಿ ಆಕೆಗೆ ಪುನರ್ವಸತಿ ಕಲ್ಪಿಸಬೇಕಿತ್ತು. ಆದರೆ ಅದನ್ನು ಕಡೆಗಣಿಸಲಾಗಿದೆ.

ಇತ್ತೀಚಿನ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಪ್ರೀತಮ್ ಮುಂಡೆ ಅವರನ್ನು ಕಡೆಗಣಿಸಲಾಗಿದೆ, ಬಿಜೆಪಿ ಇಬ್ಬರು ಸಹೋದರಿಯರನ್ನು ಬಯಸುವುದಿಲ್ಲ ಎಂದು ತೋರಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel