ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನೂತನ ಪರಿಸರ ಸಚಿವ ಭೂಪೇಂದರ್ ಯಾದವ್ 
ದೇಶ

ಕೇಂದ್ರ ಸರ್ಕಾರದ ರಾಜಕೀಯ ವ್ಯವಹಾರಗಳ ಸಮಿತಿಗೆ ಸ್ಮೃತಿ ಇರಾನಿ, ಭೂಪೇಂದರ್ ಯಾದವ್, ಸರ್ಬಾನಂದ ಸೇರ್ಪಡೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಜಕೀಯ ವ್ಯವಹಾರಗಳ ಎಲ್ಲ ಪ್ರಮುಖ ಸಂಪುಟ ಮಿತಿಯ ಭಾಗವಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ನೇಮಿಸಿ ಸರ್ಕಾರ ಸಂಪುಟ ಸಮಿತಿಗಳನ್ನು ಪುನರ್ರಚಿಸಿದೆ.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಾಜಕೀಯ ವ್ಯವಹಾರಗಳ ಎಲ್ಲ ಪ್ರಮುಖ ಸಂಪುಟ ಮಿತಿಯ ಭಾಗವಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ನೇಮಿಸಿ ಸರ್ಕಾರ ಸಂಪುಟ ಸಮಿತಿಗಳನ್ನು ಪುನರ್ರಚಿಸಿದೆ.

ಕೇಂದ್ರ ಸಚಿವರಾದ ವೀರೇಂದ್ರ ಕುಮಾರ್, ಅನುರಾಗ್ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಪುನಶ್ಚೇತನಗೊಂಡ ಸಂಪುಟ ಸಮಿತಿಯಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ನಿನ್ನೆ ರಾತ್ರಿ ಸಂಪುಟ ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

ಆದಾಗ್ಯೂ, ಭದ್ರತಾ ವ್ಯವಹಾರಗಳ ಬಗ್ಗೆ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ - ಭದ್ರತೆಯ ಕುರಿತಾದ ಸಂಪುಟ ಸಮಿತಿ - ಮತ್ತು ಸರ್ಕಾರದ ಎಲ್ಲ ಪ್ರಮುಖ ನೇಮಕಾತಿಗಳನ್ನು ರ್ಯಾಂಕಿಂಗ್ ನಲ್ಲಿ  ಕರೆಯುವ ಸಂಪುಟ ನೇಮಕಾತಿ ಸಮಿತಿ ಜಂಟಿ ಕಾರ್ಯದರ್ಶಿ ಮತ್ತು ಮೇಲಿನ ಅಧಿಕಾರಿಗಳಿದ್ದಾರೆ. ಭದ್ರತೆ ಕುರಿತ ಸಂಪುಟ ಸಮಿತಿಯ ಸದಸ್ಯರು ಪ್ರಧಾನಿ, ರಕ್ಷಣಾ ಸಚಿವ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಅವರಿದ್ದಾರೆ. ಸಂಪುಟದ ಇಬ್ಬರು ಸದಸ್ಯರ ನೇಮಕಾತಿ ಸಮಿತಿಯು ಪ್ರಧಾನಿ ಮತ್ತು ಗೃಹ ಸಚಿವರನ್ನು ಒಳಗೊಂಡಿದೆ.

ಪ್ರಧಾನಿ ನೇತೃತ್ವದ ಹೂಡಿಕೆ ಮತ್ತು ಬೆಳವಣಿಗೆ ಕುರಿತ ಸಂಪುಟ ಸಮಿತಿಯ ಹೊಸ ಸದಸ್ಯರು ಕೇಂದ್ರ ಸಚಿವ ನಾರಾಯಣ್ ರಾಣೆ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಶ್ವಿನಿ ವೈಷ್ಣವ್ ಅವರಾಗಿದ್ದಾರೆ.

ಪ್ರಧಾನಿ ನೇತೃತ್ವದ ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಸಂಪುಟ ಸಮಿತಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಭೂಪೇಂದರ್ ಯಾದವ್, ರಾಮಚಂದ್ರ ಪ್ರಸಾದ್ ಸಿಂಗ್ ಮತ್ತು ಜಿ ಕಿಶನ್ ರೆಡ್ಡಿ ಅವರನ್ನೊಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT