ಸಂಗ್ರಹ ಚಿತ್ರ 
ದೇಶ

ಗುಜರಾತ್: ನಕಲಿ ಪಾಸ್‌ಪೋರ್ಟ್‌, ವೀಸಾ ಬಳಸಿ ಜನರನ್ನು ವಿದೇಶಕ್ಕೆ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಎಟಿಎಸ್

ನಕಲಿ ಪಾಸ್‌ಪೋರ್ಟ್‌ ಮತ್ತು ವೀಸಾ ಸೃಷ್ಟಿಸಿ ಹಲವಾರು ಜನರನ್ನು ವಿದೇಶಕ್ಕೆ ಕಳುಹಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಸೂರತ್ ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಹಮದಾಬಾದ್: ನಕಲಿ ಪಾಸ್‌ಪೋರ್ಟ್‌ ಮತ್ತು ವೀಸಾ ಸೃಷ್ಟಿಸಿ ಹಲವಾರು ಜನರನ್ನು ವಿದೇಶಕ್ಕೆ ಕಳುಹಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಸೂರತ್ ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಗುಜರಾತ್ ಎಟಿಎಸ್ ತಂಡವು ಸೋಮವಾರ ಸೂರತ್‌ನ ವರಾಚಾ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಕೆನಡಾ, ಟರ್ಕಿ, ಅಮೆರಿಕಾ, ಪೆರು, ಇತರ ದೇಶಗಳ ವೀಸಾ ಅಂಚೆಚೀಟಿಗಳನ್ನು ಹೊಂದಿರುವ ಹಲವಾರು ನಕಲಿ ಪಾಸ್‌ಪೋರ್ಟ್‌ಗಳೊಂದಿಗೆ ಆಡಂ ಮೊಹಮ್ಮದ್ ಇರ್ಫಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್‌ ಮತ್ತು ವೀಸಾ ತಯಾರಿಸುವುದರ ಹೊರತಾಗಿ, ಇರ್ಫಾನ್ ಒದಗಿಸಿದ ನಕಲಿ ಗುರುತು ಮತ್ತು ದಾಖಲೆಗಳನ್ನು ಬಳಸಿ ಹಲವರು ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಈ ಪಾಸ್‌ಪೋರ್ಟ್‌ಗಳನ್ನು ಮಹಾರಾಷ್ಟ್ರ, ದೆಹಲಿ ಮತ್ತು ಇತರ ರಾಜ್ಯಗಳಲ್ಲಿನ ಪಾಸ್‌ಪೋರ್ಟ್ ಕಚೇರಿಗಳಿಂದ ನೀಡಲಾಗಿದೆ ಎಂದು ಹೇಳಿದರು.

ನಕಲಿ ಪಾಸ್‌ಪೋರ್ಟ್‌ ಮತ್ತು ವೀಸಾಗಳಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಯುಕೆ, ಕೆನಡಾ, ದಕ್ಷಿಣ ಆಫ್ರಿಕಾ ಮತ್ತು ಯುರೋಪಿಯನ್ ದೇಶಗಳಿಗೆ ಪಾಕಿಸ್ತಾನದ ಮೂಲಕ ಕಳುಹಿಸಿದ್ದಾಗಿ ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ, ಆರೋಪಿಗಳು ನಕಲಿ ಪಾಸ್‌ಪೋರ್ಟ್‌ ಮತ್ತು ವೀಸಾ ಬಳಸಿ ಭಾರತದಿಂದ ಇಬ್ಬರು ಬಾಲಕಿಯರನ್ನು ಬಾಂಗ್ಲಾದೇಶದ ಮೂಲಕ ದುಬೈಗೆ ಕಳುಹಿಸಲು ಯೋಜಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸೂರತ್, ಭರೂಚ್, ವಡೋದರಾ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ಆರೋಪಿಗಳ ವಿರುದ್ಧ ಈಗಾಗಲೇ ಕನಿಷ್ಠ ಏಳು ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿಂದೆ ಈ ಆರು ಪ್ರಕರಣಗಳಲ್ಲಿ ಆತನನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ರೀತಿಯ ಆರೋಪದ ಮೇಲೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT