ನೀಟ್ ಪರೀಕ್ಷೆ 
ದೇಶ

ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ: ಧರ್ಮೇಂದ್ರ ಪ್ರಧಾನ್

ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮಾಹಿತಿ ನೀಡಿದ್ದು, 'ಪ್ರಸಕ್ತ ಸಾಲಿನ ನೀಟ್‌ ಅನ್ನು ಕನ್ನಡ, ಪಂಜಾಬ್‌, ಮಲಯಾಳಂ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕುವೈತ್‌ನಲ್ಲಿರುವ ಭಾರತೀಯ ಸಮುದಾಯದ ವಿದ್ಯಾರ್ಥಿಗಳಿಗೆ ನೀಟ್‌-ಯುಜಿ ಬರೆಯಲು ಅನುಕೂಲವಾಗುವಂತೆ ಕೇಂದ್ರ ತೆರೆಯಲಾಗಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಭಾರತೀಯ ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಪ್ರಧಾನ್ ಮಾಹಿತಿ ನೀಡಿದರು.

ನೀಟ್ (ಯುಜಿ) 2021 ಮೊದಲ ಬಾರಿಗೆ 13 ಭಾಷೆಗಳಲ್ಲಿ ಪಂಜಾಬಿ ಮತ್ತು ಮಲಯಾಳಂ ಸೇರ್ಪಡೆಯೊಂದಿಗೆ ನಡೆಯಲಿದೆ. ಹಿಂದಿ, ಪಂಜಾಬಿ, ಅಸ್ಸಾಮೀಸ್, ಬಂಗಾಳಿ, ಒಡಿಯಾ, ಗುಜರಾತಿ, ಮರಾಠಿ, ತೆಲುಗು, ಮಲಯಾಳಂ, ಕನ್ನಡ, ತಮಿಳು, ಉರ್ದು ಮತ್ತು ಇಂಗ್ಲಿಷ್ ಭಾಷೆಗಳನ್ನು ಈಗ ನೀಡಲಾಗುತ್ತಿದೆ ಎಂದು  ಪ್ರಧಾನ್ ಹೇಳಿದರು.

ನೀಟ್ (ಯುಜಿ) 2021 ರ ನೋಂದಣಿ ಇಂದು ಸಂಜೆ 5:00 ರಿಂದ http://ntaneet.nic.in ನಲ್ಲಿ ಪ್ರಾರಂಭವಾಗಿದೆ. ನೀಟ್ (ಯುಜಿ) ಪರೀಕ್ಷೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮತ್ತು ಭಾರತೀಯ ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲವಾಗುವಂತೆ ಮಧ್ಯಪ್ರಾಚ್ಯದಲ್ಲಿ, ಕುವೈತ್‌ನಲ್ಲಿ ಪರೀಕ್ಷಾ  ಕೇಂದ್ರವನ್ನು ತೆರೆಯಲಾಗಿದೆ. ಸೆ.12ರಂದು ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿ ಆರಂಭಿಸಿದ್ದಾರೆ. ಮತ್ತೂಂದೆಡೆ, ವೈದ್ಯ ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆ ಸೆ.12ರಂದು ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿರುವ ಅವರು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2020 ರಲ್ಲಿ ಬಳಸಿದ 3,862 ರಿಂದ ಹೆಚ್ಚಿಸಲಾಗುವುದು. 

ಕಳೆದ ವರ್ಷ, ಕೋವಿಡ್-19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಕಠಿಣ ಮುನ್ನೆಚ್ಚರಿಕೆಗಳ ನಡುವೆ ಇದನ್ನು ಸೆಪ್ಟೆಂಬರ್ 13 ರಂದು ನಡೆಸಲಾಗಿತ್ತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT