ದೆಹಲಿ ಪೊಲೀಸ್ ( ಸಂಗ್ರಹ ಚಿತ್ರ) 
ದೇಶ

2020 ದೆಹಲಿ ಗಲಭೆ ಪ್ರಕರಣ: ತನಿಖೆ 'ಅಪಕ್ವ ಮತ್ತು ನಿಷ್ಪ್ರಯೋಜಕ'; ಪೊಲೀಸರಿಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!

2020 ದೆಹಲಿ ಗಲಭೆ ಪ್ರಕರಣದಲ್ಲಿ ತನಿಖೆಯೊಂದನ್ನು ಅಪಕ್ವ ಮತ್ತು ನಿಷ್ಪ್ರಯೋಜಕ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ದೆಹಲಿ ಪೊಲೀಸರಿಗೆ 25,000 ರೂಪಾಯಿ ದಂಡ ವಿಧಿಸಿದೆ.

ದೆಹಲಿ: 2020 ದೆಹಲಿ ಗಲಭೆ ಪ್ರಕರಣದಲ್ಲಿ ತನಿಖೆಯೊಂದನ್ನು ಅಪಕ್ವ ಮತ್ತು ನಿಷ್ಪ್ರಯೋಜಕ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ದೆಹಲಿ ಪೊಲೀಸರಿಗೆ 25,000 ರೂಪಾಯಿ ದಂಡ ವಿಧಿಸಿದೆ. 

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ವಿನೋದ್ ಯಾದವ್ ಈ ಆದೇಶ ನೀಡಿದ್ದು, ಭಜನ್ಪುರದ ಸ್ಟೇಷನ್ ಹೌಸ್ ಅಧಿಕಾರಿ (ಎಸ್ ಹೆಚ್ಒ) ಹಾಗೂ ಅವರ ಉಸ್ತುವಾರಿ ಅಧಿಕಾರಿಗಳು ಶಾಸನ ವಿಹಿತ ಕರ್ತವ್ಯಗಳಲ್ಲಿ ವಿಫಲರಾಗಿದ್ದು ದಂಡದ ಮೊತ್ತವನ್ನು ಪಡೆಯಬೇಕೆಂದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ. 

ಗಲಭೆ ಸಂದರ್ಭದಲ್ಲಿ ಗುಂಡೇಟಿನಿಂದ ಎಡಭಾಗದ ಕಣ್ಣನ್ನು ಕಳೆದುಕೊಂಡಿದ್ದ ಮೊಹಮ್ಮದ್ ನಾಸಿರ್ ಎಂಬಾತನ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಬೇಕೆಂಬ ಮ್ಯಾಜಿಸ್ಟೀರಿಯಲ್ ಕೋರ್ಟ್ ಆದೇಶವನ್ನು ಪೊಲೀಸರು ಪ್ರಶ್ನಿಸಿದ್ದರು. 

ತನಿಖಾಧಿಕಾರಿಗಳು, ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ಹೊಸ ಎಫ್ಐಆರ್ ನ ಅಗತ್ಯವಿಲ್ಲವೆಂದೂ, ಮೊಹಮ್ಮದ್ ನಾಸಿರ್ ಎಂಬಾತನ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿರುವವರು ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ ಇರದ ಕಾರಣ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲವೆಂದೂ ಹೇಳಿದ್ದರು. 

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪೊಲೀಸರ ತನಿಖೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು ಪೊಲೀಸ್ ತನಿಖೆಯಲ್ಲಿ ಪರಿಣಾಮಕಾರಿತ್ವ ಹಾಗೂ ನ್ಯಾಯದ ಕೊರತೆ ಕಾಣುತ್ತಿದ್ದು, ತನಿಖೆಯನ್ನು ಪ್ರಾಸಂಗಿಕ, ಅಪಕ್ವ ಮತ್ತು ನಿಷ್ಪ್ರಯೋಜಕ ವಿಧಾನದಲ್ಲಿ ನಡೆಸಲಾಗಿದೆ ಎಂದು ಹೇಳಿದ್ದಾರೆ. 

ನ್ಯಾಯಾಂಗದ ಗಮನದಲ್ಲಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವುದಕ್ಕಾಗಿ ಈ ಆದೇಶದ ಪ್ರತಿಯನ್ನು ದೆಹಲಿಯ ಪೊಲೀಸ್ ಆಯುಕ್ತರಿಗೆ ಕಳಿಸಬೇಕೆಂದೂ ಕೋರ್ಟ್ ಇದೇ ವೇಳೆ ಸೂಚನೆ ನೀಡಿದೆ. ಕಾನೂನಿನ ಚೌಕಟ್ಟಿನಲ್ಲಿ ಪರಿಹಾರವನ್ನು ಪಡೆಯುವುದಕ್ಕೆ ಮೊಹಮ್ಮದ್ ನಾಸಿಸ್ ಮುಕ್ತರಾಗಿದ್ದು, ಆತನ ದೂರನ್ನು ಆಧರಿಸಿ ಪ್ರತ್ಯೇಕ ಎಫ್ಐಆರ್ ನ್ನು ದಾಖಲಿಸಬೇಕು ಎಂದು ಕೋರ್ಟ್ ಹೇಳಿದೆ. 

ಅರ್ಜಿದಾರರ ಪರ ವಕೀಲ ಮೆಹ್ಮೂದ್ ಪ್ರಾಚ ವಾದ ಮಂಡಿಸಿ, ನರೇಶ್ ತ್ಯಾಗಿ ಎಂಬಾತ ನಾಸಿರ್ ಮೇಲೆ ಗುಂಡು ಹಾರಿಸಿದ್ದ ಪರಿಣಾಮ ಎಡಭಾಗದ ಕಣ್ಣಿದ ದೃಷ್ಟಿ ಕಳೆದುಕೊಂಡಿದ್ದಾನೆ, ಮನವಿಯ ಹೊರತಾಗಿಯೂ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಪರಿಣಾಮ ನ್ಯಾಯಾಂಗದ ಮೊರೆ ಬಂದಿದ್ದೇವೆ ಎಂದು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT