ಶರದ್ ಪವಾರ್ 
ದೇಶ

ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್

ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ಹೇಳಿದ್ದಾರೆ.

ಮುಂಬೈ: ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ಹೇಳಿದ್ದಾರೆ.

ಈ ಕುರಿತಂತೆ ಮುಂಬೈನಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ. ಅಲ್ಲದೆ 2024ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯೂ ಅಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

300ಕ್ಕೂ ಅಧಿಕ ಸಂಸದರನ್ನು ಹೊಂದಿರುವ ಪಕ್ಷ ಆಡಳಿತ ನಡೆಸುತ್ತಿದೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ನನಗೆ ತಿಳಿದಿದೆ. ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಆಗಲಾರೆ. ಅಂತೆಯೇ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಅಥವಾ ಮಹಾರಾಷ್ಟ್ರದ  ವಿಧಾನಸಭಾ ಚುನಾವಣೆಗಳ ಬಗ್ಗೆ ಈಗ ಯಾವ ನಿರ್ಧಾರ ಕೈಗೊಂಡಿಲ್ಲ. ಚುನಾವಣೆಗಳು ಇನ್ನೂ ದೂರ ಇವೆ. ರಾಜಕೀಯ ಸನ್ನಿವೇಶಗಳೂ ಬದಲಾಗುತ್ತಲೇ ಇರುತ್ತವೆ ಎಂದೂ ಅವರು ಹೇಳಿದ್ದಾರೆ.

ಇನ್ನು ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ರಾಹುಲ್‌ ಗಾಂಧಿ ಹಾಗೂ ಶಿವಸೇನಾ ಮುಖ್ಯ ವಕ್ತಾರ ಸಂಜತ್‌ ರಾವತ್‌ ಅವರ ಭೇಟಿ ಬೆನ್ನಲ್ಲೇ ಮಾತನಾಡಿದ್ದ ಸಂಜಯ್ ರಾವತ್, ಪ್ರಧಾನಿ ಹುದ್ದೆಗೆ ಶರದ್‌ ಪವಾರ್ ಅವರಿಗಿಂತ ಉತ್ತಮ ನಾಯಕ ತಮಗೆ ಕಾಣಿಸುತ್ತಿಲ್ಲ ಎಂಬ ಹೇಳಿಕೆ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಶರದ್ ಪವಾರ್ ಈ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT